ನವದೆಹಲಿ: ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಗಲ್ಲುಶಿಕ್ಷೆಯಾಗುವುದು ಖಚಿತವಾಗಿದೆ. ಬುಧವಾರ, ಸುಪ್ರೀಂಕೋರ್ಟ್ನ ಮೂವರು ನ್ಯಾಯಾಧೀಶರ ನೇತೃತ್ವದ ನ್ಯಾಯಪೀಠ ಅಪರಾಧಿ ಮುಕೇಶ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಕ್ರಮವನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಸುಪ್ರೀಂಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದ. ಈ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ವಕೀಲ ಅಂಜನಾ ಪ್ರಕಾಶ್, ರೆಬಿಕಾ ಜಾನ್ ಮುಕೇಶ್ ಪರವಾಗಿ ವಕಾಲತ್ತು ವಹಿಸಿದ್ದಾರೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಾಸಿಕ್ಯೂಶನ್ ಪರ ವಕಾಲತ್ತು ವಹಿಸಿದ್ದರು.
ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವ ಮೊದಲು ಎಲ್ಲಾ ದಾಖಲೆಗಳನ್ನು ವಿಸ್ತೃತವಾಗಿ ಪರಿಶೀಲಿಸಿದ್ದಾರೆ, ಹೀಗಾಗಿ ಈ ಬಗ್ಗೆ ಇನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ, ಅಪರಾಧಿಗಳನ್ನು ಫೆ. 1 ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.
ಈಗಾಗಲೇ ನ್ಯಾಯಾಲಯ ಅಪರಾಧಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದ್ದು, ಫೆ. 1 ರಂದು ಗಲ್ಲಿಗೇರಿಸಲು ದಿನಾಂಕ ನಿಗದಿ ಮಾಡಿದೆ. ಆದರೆ ಅಪರಾಧಿಗಳ ಪರ ವಕಾಲತ್ತು ವಹಿಸುತ್ತಿರುವ ವಕೀಲರು ಅಪರಾಧಿಗಳನ್ನು ರಕ್ಷಣೆ ಮಾಡಲು ಒಂದಲ್ಲ ಎರಡಲ್ಲ ನೂರಾರು ದಾರಿಗಳನ್ನು ಹುಡುಕಿ ಶಿಕ್ಷೆಯನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದ್ದಾರೆ.
2012 ರ ಡಿಸೆಂಬರ್ 16 ರಂದು ಈ ಅಪರಾಧಿಗಳು 23 ವರ್ಷದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಅತ್ಯಾಚಾರಕ್ಕೀಡು ಮಾಡಿ ಕೊಲೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.