ಲಕ್ನೋ: ಡಿಸೆಂಬರ್ 12 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಡಾ. ಕಫೀಲ್ ಖಾನ್ನನ್ನು ಗುರುವಾರ ಉತ್ತರ ಪ್ರದೇಶದ ವಿಶೇಷ ಪೊಲೀಸ್ ಕಾರ್ಯಪಡೆ ಮುಂಬೈನಲ್ಲಿ ಬಂಧನಕ್ಕೊಳಪಡಿಸಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಯಲ್ಲಿ ಖಾನ್ ವಿವಾದಾತ್ಮಕವಾಗಿ ಮಾತನಾಡುತ್ತಿದ್ದನು.
ಐಪಿಸಿಯ ಸೆಕ್ಷನ್ 153-ಎ ಅಡಿಯಲ್ಲಿ ಅಲಿಗಢದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಖಾನ್ ಯಾವುದೇ ಹೆಸರುಗಳನ್ನು ಉಲ್ಲೇಖ ಮಾಡದೇ “ಮೋಟಭಾಯ್” ಎಲ್ಲರಿಗೂ ಹಿಂದೂಗಳು ಅಥವಾ ಮುಸ್ಲಿಮರಾಗಲು ಕಲಿಸುತ್ತಿದ್ದಾರೆ ಆದರೆ ಮಾನವರಾಗುವುದನ್ನು ಕಲಿಸುತ್ತಿಲ್ಲ” ಎಂದಿದ್ದ.
ಅಸ್ತಿತ್ವಕ್ಕೆ ಬಂದಾಗಿನಿಂದಲೂ ಆರ್ಎಸ್ಎಸ್ಗೆ ಸಂವಿಧಾನದ ಬಗ್ಗೆ ನಂಬಿಕೆಯಿಲ್ಲ ಎಂದು ಆತ ಹೇಳಿದ್ದಾನೆ. ಸಿಎಎ ಮೂಲಕ ಜನರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲಾಗುತ್ತಿದೆ ಎಂದು ಖಾನ್ ಹೇಳಿದ್ದ.
2017ರಲ್ಲಿ ಗೋರಖ್ಪುರದ ಸರ್ಕಾರಿ ಬಿಆರ್ಡಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 30 ಮಕ್ಕಳನ್ನು ಸಾವನ್ನಪ್ಪಿದ ಆರೋಪದ ಮೇಲೆ ಬಂಧಿಸಲ್ಪಟ್ಟಾಗ ಡಾ.ಕಫೀಲ್ ಖಾನ್ ಹೆಸರು ಮುನ್ನಲೆಗೆ ಬಂದಿತ್ತು.
ಘಟನೆಯ ಸಮಯದಲ್ಲಿ ಖಾನ್ ಎಇಎಸ್ (ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್) ವಾರ್ಡ್ನ ನೋಡಲ್ ಅಧಿಕಾರಿಯಾಗಿದ್ದ. ನಂತರ ಆತನನ್ನು ಆಡಳಿತವು ಸೇವೆಯಿಂದ ವಜಾಗೊಳಿಸಿತು.ಆತ ಸುಮಾರು ಏಳು ತಿಂಗಳು ಜೈಲಿನಲ್ಲಿದ್ದ. 2018ರ ಎಪ್ರಿಲ್ನಲ್ಲಿ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.