ನವದೆಹಲಿ: ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಬಂಧಿತನಾಗಿರುವ ಜೆಎನ್ಯು ವಿದ್ಯಾರ್ಥಿ ಮುಸ್ಲಿಂ ಮೂಲಭೂತವಾದಿಯಾಗಿ ಪರಿವರ್ತನೆಗೊಂಡಿರುವ ವ್ಯಕ್ತಿಯಾಗಿದ್ದಾನೆ, ಭಾರತವನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಪರಿವರ್ತಿಸಲು ಆತ ಬಯಸುತ್ತಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ವೈರಲ್ ಆಗಿರುವ ವಿಡಿಯೋ ಸತ್ಯವಾದದು ಎಂಬುದನ್ನು ಸ್ಪಷ್ಟ ಪಡಿಸಿರುವ ಶರ್ಜೀಲ್, ಮುಸ್ಲಿಮರನ್ನು ದೇಶದಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಹೀಗಾಗಿ ನಾನು ಧ್ವನಿ ಎತ್ತುತ್ತಿದ್ದೇನೆ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಅಂತಹ ಹೇಳಿಕೆಯಿಂದ ಬಂಧಿತನಾಗುತ್ತೇನೆ ಎಂಬ ಅರಿವು ನನಗಿತ್ತು, ಆದರೆ ನನಗ್ಯಾವ ಪಶ್ಚಾತ್ತಾಪವೂ ಇಲ್ಲ. ನನ್ನ ಪ್ರತಿಭಟನೆಯನ್ನು ನಾನು ಮುಂದುವರೆಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.
ಉದ್ದೇಶಪೂರ್ವಕವಾಗಿಯೇ ಆತ ಆ ರೀತಿಯ ಹೇಳಿಕೆಯನ್ನು ನೀಡಿದ್ದಾನೆ ಎಂದು ಅಪರಾಧ ವಿಭಾಗ ಮತ್ತು ವಿಶೇಷ ಪಡೆ ಪೊಲೀಸರು ಹೇಳಿದ್ದಾರೆ.
ಜನವರಿ 25ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿರುವ ಈತ, “ನಾವೆಲ್ಲರೂ ಒಟ್ಟಾದರೆ, ಈಶಾನ್ಯವನ್ನು ಭಾರತದಿಂದ ಪ್ರತ್ಯೇಕಿಸಬಹುದು. ಶಾಶ್ವತವಾಗಿ ಮಾಡಲು ಸಾಧ್ಯವಾಗದಿದ್ದರೂ, ಕನಿಷ್ಠ 1-2 ತಿಂಗಳುಗಳ ಕಾಲ ಆದರೂ ಇದನ್ನು ಮಾಡಬಹುದು. ಆಗ ನಮಗೆ ಕನಿಷ್ಠ 1 ತಿಂಗಳುಗಳ ಕಾಲ ಆದರೂ ಆಡಳಿತವನ್ನು ನಿಯಂತ್ರಿಸಬಹುದು” ಎಂದು ಪ್ರತಿಭಟನಾಕಾರರಿಗೆ ಹೇಳಿದ್ದ.
ಈ ಬಗೆಗಿನ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಈತನನ್ನು ಬಿಹಾರದಲ್ಲಿ ಬಂಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.