ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-20ರ ಆರ್ಥಿಕ ಸಮೀಕ್ಷೆಯನ್ನು ಇಂದು ಸದನದಲ್ಲಿ ಮಂಡಿಸಿದ್ದಾರೆ. ಶನಿವಾರ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಾಗುತ್ತಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) ಶೇಕಡಾ 5 ರಷ್ಟು ಇರಲಿದೆ, 2021 ಕೊನೆಯಾಗಲಿರುವ ಮುಂದಿನ ಹಣಕಾಸು ವರ್ಷದಲ್ಲಿ ಜಿಡಿಪಿ ಶೇಕಡ 6.-6.5 ರಷ್ಟು ಇರಲಿದೆ ಎಂದು ಸರ್ಕಾರದ ಆರ್ಥಿಕ ಸಮೀಕ್ಷೆ ಅಂದಾಜಿಸಿದೆ.
ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದ್ದು, ಅಧಿವೇಶನದ ಎರಡನೇ ಭಾಗವು ಮಾರ್ಚ್ 2 ರಿಂದ ಪ್ರಾರಂಭವಾಗಿ ಏಪ್ರಿಲ್ 3 ಕ್ಕೆ ಕೊನೆಗೊಳ್ಳಲಿದೆ.
ಬಜೆಟ್ ಅಧಿವೇಶನದ ಮುನ್ನ, ಕೇಂದ್ರ ಸರ್ಕಾರವು ಗುರುವಾರ ಸರ್ವಪಕ್ಷ ಸಭೆ ಕರೆಯಿತು. ಪ್ರಧಾನಿ ಮೋದಿ, ಹಿರಿಯ ಸಚಿವರುಗಳು, ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಮತ್ತು ಕಾಂಗ್ರೆಸ್ನ ಗುಲಾಮ್ ನಬಿ ಆಜಾದ್ ಮತ್ತು ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ, ಇತರ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಮತ್ತು ಆರ್ಥಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂಬ ಸಂಸದರ ಬೇಡಿಕೆಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.