ನವದೆಹಲಿ: ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಶುಕ್ರವಾರ ‘ಸಂಕಲ್ಪ ಪತ್ರ’ ಅಥವಾ ಅದರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪಕ್ಷದ ಹಿರಿಯ ಮುಖಂಡರಾದ ನಿತಿನ್ ಗಡ್ಕರಿ, ಹರ್ಷವರ್ಧನ್, ಪ್ರಕಾಶ್ ಜಾವಡೇಕರ್ ಅವರ ಸಮ್ಮುಖದಲ್ಲಿ ಬಿಜೆಪಿಯ ದೆಹಲಿ ಘಟಕವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಈ ಸಂದರ್ಭದಲ್ಲಿ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಉಪಸ್ಥಿತರಿದ್ದರು.
ದೆಹಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರವು, ಪೌರತ್ವ ತಿದ್ದುಪಡಿ ಕಾಯ್ದೆ, ಅದರ ವಿಷಯದಲ್ಲಿ ನಡೆದ ಹಿಂಸಾಚಾರ ಮತ್ತು 370 ನೇ ವಿಧಿಯ ರದ್ದುಗೊಳಿಸುವಿಕೆ ಮುಂತಾದ ರಾಷ್ಟ್ರೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ.
ಪಕ್ಷವು ಬಿಡುಗಡೆ ಮಾಡಿದ ಸಂಕಲ್ಪ ಪತ್ರದ ಮತ್ತೊಂದು ಪ್ರಮುಖ ಅಂಶವೆಂದರೆ, ಕೊಳೆಗೇರಿ ಪುನರಾಭಿವೃದ್ಧಿ ಯೋಜನೆಯಡಿಯಲ್ಲಿ ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವವರಿಗೆ ಮಾಲೀಕತ್ವದ ಹಕ್ಕುಗಳನ್ನು ಒದಗಿಸುವ ಮತ್ತು ನಗರದ ಜುಗ್ಗಿ-ಜೋಪ್ರಿ ಕ್ಲಸ್ಟರ್ಗಳಲ್ಲಿ ವಾಸಿಸುವವರಿಗೆ ಶಾಶ್ವತ ಮನೆಗಳನ್ನು ಒದಗಿಸುವ ಮೋದಿ ಸರ್ಕಾರದ ಕಾರ್ಯಗಳನ್ನು ಜನರಿಗೆ ಒತ್ತಿ ಹೇಳುವುದು.
ಫೆಬ್ರವರಿ 8 ರಂದು ದೆಹಲಿಯಲ್ಲಿ ಮತದಾನ ನಡೆಯಲಿದ್ದು, ಮೂರು ದಿನಗಳ ನಂತರ ಫೆಬ್ರವರಿ 11 ರಂದು ಫಲಿತಾಂಶ ಪ್ರಕಟವಾಗಲಿದೆ. ಆಮ್ ಆದ್ಮಿ ಪಕ್ಷ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.