ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2020-21ರ ಬಜೆಟ್ ಅನ್ನು ಮಂಡನೆಗೊಳಿಸಿದ್ದಾರೆ.
ಬಜೆಟ್ನಲ್ಲಿ ಮಹತ್ವದ ತೆರಿಗೆ ಕಡಿತ ಘೋಷಣೆಯನ್ನು ಮಾಡಲಾಗಿದೆ.
ರೂ.5- 7.5 ಲಕ್ಷದವರೆಗಿನ ಆದಾಯಕ್ಕೆ ಶೇ.10ರಷ್ಟು ಆದಾಯ ತೆರಿಗೆ ಕಡಿತ. ಪ್ರಸ್ತುತ ಶೇ.20ರಷ್ಟು ತೆರಿಗೆ ಇದ್ದು, ಅದು ಇನ್ನು ಮುಂದೆ ಶೇ.10ರಷ್ಟು ಆಗಲಿದೆ. ರೂ.7.5-10 ಲಕ್ಷ ಆದಾಯ ಇರುವವರಿಗೆ ಇನ್ನು ಮುಂದೆ ಶೇಕಡ 15 ರಷ್ಟು ತೆರಿಗೆ ವಿಧಿಸಲಾಗುತ್ತದೆ. ಈಗ ಶೇ. 20ರಷ್ಟು ತೆರಿಗೆ ಇದೆ. ರೂ. 10-12.5 ಲಕ್ಷ ಆದಾಯಕ್ಕೆ ಶೇಕಡ 20ರಷ್ಟು ತೆರಿಗೆ, ರೂ. 12.5-15 ಲಕ್ಷ ಆದಾಯಕ್ಕೆ ಶೇಕಡ 25 ರಷ್ಟು ತೆರಿಗೆ ವಿಧಿಸಲಾಗುತ್ತದೆ. ರೂ.15 ಲಕ್ಷಕ್ಕೂ ಹೆಚ್ಚು ಆದಾಯ ಇರುವವರಿಗೆ ಯಾವುದೇ ವಿನಾಯಿತಿ ಇಲ್ಲ. ರೂ. 2.5 ಲಕ್ಷದವರೆಗೆ ತೆರಿಗೆ ಇಲ್ಲ. ರೂ. 2.5- ರೂ 5 ಲಕ್ಷದವರೆಗೆ ಇರುವ ಶೇ. 5ರಷ್ಟು ತೆರಿಗೆ ಇನ್ನು ಇಲ್ಲ.
ರಾಷ್ಟ್ರೀಯ ಟೆಕ್ನಿಕಲ್ ಟೆಕ್ಸ್ಟೈಲ್ ಯೋಜನೆಗೆ 1480 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ತಾಂತ್ರಿಕ ಜವಳಿ ಯೋಜನೆ ಘೋಷಣೆ ಮಾಡಲಾಗಿದೆ.
ರಫ್ತು ಉದ್ಯಮ ಉತ್ತೇಜನಕ್ಕೆ ‘ನಿರ್ವಿತ್’ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಇನ್ವೆಸ್ಟ್ಮೆಂಟ್ ಕ್ಲಿಯರೆನ್ಸ್ ಸೆಲ್ ಸ್ಥಾಪನೆಗೆ ಅಸ್ತು ಎನ್ನಲಾಗಿದೆ, ಪಿಪಿಪಿ ಯೋಜನೆಯಡಿಯಲ್ಲಿ 5 ಸ್ಮಾರ್ಟ್ ಸಿಟಿಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲು ಇರಿಸಲಾಗಿದೆ.
ಹೊಸದಾಗಿ ರಾಷ್ಟ್ರೀಯ ಪೊಲೀಸ್, ವಿಧಿವಿಜ್ಞಾನ ವಿವಿ ಸ್ಥಾಪನೆ. ಹೊಸ ವೈದ್ಯರ ಉತ್ತೇಜನಕ್ಕಾಗಿ ಮೆಡಿಕಲ್ ಕಾಲೇಜು ಸ್ಥಾಪನೆ. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್ ಲೈನ್ ಕೋರ್ಸ್. ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ನಿರ್ಧರಿಸಲಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿ ನೀಡಲು ನಿರ್ಧಾರ. 150 ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮದ ಪರಿಣಾಮಕಾರಿ ಜಾರಿಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
ಉದ್ಯೋಗಾಧಾರಿತ ಕೋರ್ಸ್ಗಳಿಗೆ ಆದ್ಯತೆ. ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂಪಾಯಿ ಅನುದಾನ ಮೀಸಲು. ಸ್ವಚ್ಛ ಭಾರತ್ ಯೋಜನೆಗೆ 12,300 ಕೋಟಿ ರೂ. ಅನುದಾನ. ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ. ಜಲಜೀವನ ಯೋಜನೆಗೆ 3.6 ಲಕ್ಷ ಕೋಟಿ ರೂ. ಮೀಸಲು. ಸಾಗರ ಮಿತ್ರ ಯೋಜನೆಯಡಿ ಮತ್ಸೋದ್ಯಮಕ್ಕೆ ಉತ್ತೇಜನ ನೀಡಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಕೃಷಿ ವಲಯಕ್ಕೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ. ಗ್ರಾಮೀಣಾಭಿವೃದ್ದಿಗೆ 1.23 ಲಕ್ಷ ಕೋಟಿ ರೂಪಾಯಿ ಮೀಸಲು. ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ. ಕೃಷಿ ಉತ್ಪನ್ನಗಳಿಗಾಗಿ ಇ-ಮಾರುಕಟ್ಟೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ. ಜಾನುವಾರುಗಳ ಕಾಲು ಬಾಯಿ ರೋಗ ತಡೆಗೆ ಕ್ರಮ. ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಾರುಕಟ್ಟೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಪ್ರಸ್ತಾವನೆ ಮಾಡಲಾಗಿದೆ.
ನಬಾರ್ಡ್ಗೆ 15 ಲಕ್ಷ ಕೋಟಿ ರೂ. ಘೋಷಣೆ. ಶೂನ್ಯ ಬಂಡವಾಳ ಕೃಷಿ ಪದ್ಧತಿಗೆ ಜೈವಿಕ್ ಖೇತಿ ಯೋಜನೆ ಜಾರಿ. ರೈತರ ಅನುಕೂಲಕ್ಕಾಗಿ ಕೃಷಿ ರೈಲು, ಕೃಷಿ ಉಡಾನ್ ಯೋಜನೆ ಜಾರಿ. ಮುದ್ರಾ, ನಬಾರ್ಡ್ ಯೋಜನೆಯಡಿ ಸಾಲ ಸೌಲಭ್ಯ.
ರೈತರಿಗಾಗಿ ಧಾನ್ಯ ಲಕ್ಷ್ಮಿ ಯೋಜನೆ ಜಾರಿ. ರೈತ ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿ. ಕುಸುಮ್ ಯೋಜನೆ ವಿಸ್ತರಣೆ. ರೈತ ಮಹಿಳೆಯರಿಗಾಗಿ ಧಾನ್ಯ ಲಕ್ಷ್ಮಿ ಯೋಜನೆ. ಪ್ರಧಾನಮಂತ್ರಿ ಫಸಲ್ ಭೀಮ್ ಯೋಜನೆಯಡಿ ರೈತರ ಪಂಪ್ ಸೆಟ್ ಸೌರ ವಿದ್ಯುತ್ ಜತೆ ಜೋಡಣೆ. ಫಸಲ್ ಭೀಮಾ ಯೋಜನೆಯಿಂದ 6.11 ಕೋಟಿ ರೈತರಿಗೆ ಅನುಕೂಲವಾಗಿದೆ. ಸಮತೋಲಿತ ರಸಗೊಬ್ಬರ ಬಳಕೆ ಯೋಜನೆ ಜಾರಿ. ರಾಸಾಯನಿಕ ಗೊಬ್ಬರ ಬದಲು ಸಾವಯವ ಗೊಬ್ಬರ ಬಳಕೆಗೆ ಪ್ರೋತ್ಸಾಹ.
ಬರಡು ಭೂಮಿಯಲ್ಲಿ ಸಾವಯವ ಕೃಷಿ ಮಾಡಲು ಪ್ರೋತ್ಸಾಹ. ದೇಶದ 100 ಜಿಲ್ಲೆಗಳಲ್ಲಿ ಜಲವರ್ಧನೆಗೆ ಕ್ರಮ. 2016 ರ ಮಾದರಿ ಕೃಷಿ ಭೂಮಿ ಸುಧಾರಣೆಗಳನ್ನು ರಾಜ್ಯ ಜಾರಿಗೆ ತರಲಿದೆ. 20 ಲಕ್ಷ ರೈತರಿಗೆ ಸೋಲಾರ್ ಪಂಪ್ ವಿತರಣೆ. ಬರಡು ಭೂಮಿಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ. ಕೃಷಿ ಮಾರುಕಟ್ಟೆ ಉದಾರೀಕರಣಗೊಳಿಸಲು ಕ್ರಮ. ಕೃಷಿ ಅಭಿವೃದ್ದಿಗೆ 16 ಅಂಶಗಳು ಪ್ರಕಟ. ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಕ್ರಮ.
2022ರ ವೇಳೆಗೆ ಕೃಷಿ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಆರ್ಥಿಕ ಒಳಗೊಳ್ಳುವಿಕೆ ರೈತರ ಆದಾಯ ದ್ವಿಗುಣಗೊಳ್ಳಲು ಸಾಧ್ಯವಾಗಿಸುತ್ತದೆ. ಅಂತ್ಯೋದಯ ಉದ್ಧಾರಕ್ಕೆ ಬಜೆಟ್ನಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಕಳೆದ 5 ವರ್ಷಗಳಲ್ಲಿ ಭಾರತೀಯರನ್ನು ಉದ್ಯಮಶೀಲರನ್ನಾಗಿಸಲು ಪ್ರಯತ್ನಿಸಲಾಗಿದೆ. ಭಾರತ ಜಗತ್ತಿನ 5 ನೇ ಅತೀ ದೊಡ್ಡ ಆರ್ಥಿಕ ದೇಶವಾಗಿದೆ. 271 ಮಿಲಿಯನ್ ಜನರು ಬಡತನದಿಂದ ಹೊರ ಬಂದಿದ್ದಾರೆ. 2018-19ರಲ್ಲಿ ಶೇ.7ರಷ್ಟು ದೇಶದ ಆರ್ಥಿಕ ವೃದ್ದಿ ದರ ದಾಖಲಾಗಿತ್ತು ಎಂದು ಸಚಿವೆ ಹೇಳಿದ್ದಾರೆ.
ಹಿಂದುಳಿದ ವರ್ಗಗಳಿಗೆ ಸಾಲ ಸೌಲಭ್ಯ, ಡಿಜಿಟಲ್ ಇಂಡಿಯಾ ಗುರಿ ಸಾಕಾರದತ್ತ ಹೆಜ್ಜೆ ಹಾಕಿದೆ. ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಈಡೇರಿಸಲಿದೆ. 40 ಕೋಟಿ ಜನರು ಈ ಬಾರಿ ಜಿಎಸ್ಟಿ ಪಾವತಿಸಿದ್ದಾರೆ. ಜಿಎಸ್ಟಿಯಿಂದ ರಿಟರ್ನ್ಸ್ ಸಲ್ಲಿಕೆ ತುಂಬಾ ಸರಳವಾಗಿದೆ. ನಮ್ಮ ಪ್ರಧಾನಿ ಮೋದಿಯಿಂದಾಗಿ ಸರ್ಕಾರ ನೀಡುವ ಪ್ರತಿ ಪೈಸೆ ನಾಗರಿಕನಿಗೆ ಸಿಗುತ್ತಿದೆ. ಗೃಹ ನಿರ್ಮಾಣದ ಮೂಲಕ ಜನರಿಗೆ ನೆರವು. ಈ ಬಜೆಟ್ ಆದಾಯ ಹೆಚ್ಚಳಕ್ಕೆ ಉತ್ತೇಜನ ನೀಡಲಿದೆ. ವಾರ್ಷಿಕವಾಗಿ ಒಂದು ಲಕ್ಷ ಕೋಟಿ ರೂಪಾಯಿ ತೆರಿಗೆ ವಿನಾಯ್ತಿ ಸಿಕ್ಕಿದೆ ಎಂದಿದ್ದಾರೆ.
ಸಾರಿಗೆ ವಲಯದಲ್ಲಿ ಭಾರೀ ಅಭಿವೃದ್ಧಿಗೆ ಜಿಎಸ್ಟಿ ಕಾರಣವಾಗಿದೆ. ಜಿಎಸ್ಟಿಯಿಂದ ಪ್ರತಿಯೊಂದು ಕುಟುಂಬಕ್ಕೂ ಒಳಿತಾಗಿದೆ. ಚೆಕ್ ಪೋಸ್ಟ್ಗಳ ನಿರ್ಮೂಲನೆಯಿಂದ ಶೇ.20ರಷ್ಟು ಸಮಯ ಉಳಿತಾಯ. ಜಿಎಸ್ಟಿ ಜಾರಿಯಿಂದ ರಾಜಕೀಯ ಮೀರಿ ಬೆಳೆಯುತ್ತದೆ ಎಂಬುದು ಸಾಬೀತಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.