ನವದೆಹಲಿ: ‘ಜಲ್ ಫಾರ್ ಆಲ್ ಮಿಷನ್’ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು 3.6 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಅನುಮೋದಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಯ ವೇಳೆ ಘೋಷಿಸಿದ್ದಾರೆ.
ಜಲ ಜೀವನ್ ಮಿಷನ್ ಎಂದೂ ಕರೆಯಲ್ಪಡುವ ಈ ಯೋಜನೆ ದೇಶಾದ್ಯಂತದ ಜನರಿಗೆ ಶುದ್ಧ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ, ಮುಖ್ಯವಾಗಿ ನೀರಿನ ಕೊರತೆಯು ದೊಡ್ಡ ಮಟ್ಟದಲ್ಲಿರುವ ಪ್ರದೇಶಗಳಲ್ಲಿ ನೀರನ್ನು ಪೂರೈಕೆ ಮಾಡುವುದು ಇದರ ಗುರಿಯಾಗಿದೆ.
2019ರಲ್ಲಿ ಕೇಂದ್ರ ಸರ್ಕಾರವು ಭಾರತದ ಎಲ್ಲ ಮನೆಗಳಿಗೆ 2024 ರ ವೇಳೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಾಗಿ ಭರವಸೆ ನೀಡಿತ್ತು.
ಭಾರತದ ಆರ್ಥಿಕತೆಯು ಮಂದಗತಿಯ ಮೂಲಕ ಸಾಗುತ್ತಿರುವ ಸಮಯದಲ್ಲಿ ಬಜೆಟ್ ಮಂಡನೆಗೊಂಡಿದೆ. ಆರ್ಥಿಕತೆಯ ಶಕ್ತಿಗಳನ್ನು ಪುನರುಜ್ಜೀವನಗೊಳಿಸಲು ಸಚಿವೆಸೀತಾರಾಮನ್ ಮತ್ತು ಅವರ ತಂಡವು ಸಾಕಷ್ಟು ಪರಿಶ್ರಮ ಪಟ್ಟಿದೆ.
ಅನ್ನದಾತ ವಿದ್ಯುತ್ ದಾತನೂ ಆಗುವಂತೆ ಮಾಡಲು ಕ್ರಮಕೈಗೊಳ್ಳುವುದಾಗಿ ಘೋಷಣೆ ಮಾಡಾಗಿದೆ, ಬರಡು ಭೂಮಿಯಲ್ಲಿ ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗಿದೆ. ದೇಶದ 100 ಜಿಲ್ಲೆಗಳಲ್ಲಿ ಜಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ..
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.