ನವದೆಹಲಿ: ಸಿಎಎ ವಿರುದ್ಧ ದೆಹಲಿಯ ಶಹೀನ್ ಬಾಗ್ನಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ ಸ್ಥಳಿಯ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಹೀನ್ ಬಾಗ್ ಸಮೀಪ ರಸ್ತೆ ತಡೆ ಮಾಡಿರುವುದಕ್ಕೆ ನಾಗರಿಕರು ತೀವ್ರ ಆಕ್ಷೇಪ ಎತ್ತಿದ್ದಾರೆ. ಶಹೀನ್ ಭಾಗ್ ಪ್ರತಿಭಟನೆಯನ್ನು ಖಂಡಿಸಿ ಫೆ.2ರಂದು ಶಹೀನ್ ಭಾಗ್ ಸಮೀಪದಲ್ಲೇ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಮತ್ತು ನೋಯ್ಡಾದ ಐಟಿ ಹಬ್ ಅನ್ನು ಕಲಿಂಡಿ ಕುಂಜ್ಗೆ ಸಂಪರ್ಕಿಸುವ ರಸ್ತೆಯನ್ನು ಪ್ರಯಾಣಕ್ಕೆ ಮುಕ್ತಗೊಳಿಸುವಂತೆ, ಬ್ಯಾರಿಕೇಡ್ ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ಕಳೆದ 50 ದಿನಗಳಿಂದ ಇಲ್ಲಿನ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಲಾಗಿದೆ.
ಕೆಲಸಕ್ಕೆ ತೆರಳುವ ವೇಳೆ ಬ್ಯಾರಿ ಕೇಡ್ ಪರಿಣಾಮವಾಗಿ ತೀವ್ರ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸ್ಥಳಿಯರು ಹೇಳಿದ್ದಾರೆ. ಶಹೀನ್ ಬಾಗ್ನಲ್ಲಿ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದಿರುವ ಕಾರಣ ಮಕ್ಕಳಿಗೆ ಶಾಲೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಶಹೀನ್ ಬಾಗ್ನಲ್ಲಿನ ದಿಗ್ಬಂಧನದ ವಿರುದ್ಧ ಸ್ಥಳಿಯರು ಭಾರಿ ಸಂಖ್ಯೆಯಲ್ಲಿ ಒಟ್ಟುಗೂಡಿದ್ದರಿಂದ, ದೆಹಲಿ ಪೊಲೀಸರು ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡರು ಮತ್ತು ಯಾವುದೇ ಅಹಿತಕರ ಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಹಿರಿಯ ಅಧಿಕಾರಿಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಿದರು.
ಸ್ಥಳಿಯರೊಂದಿಗೆ ಮಾತನಾಡಿ ಶಾಂತಿ ಕಾಪಾಡುವಂತೆ ಕೇಳಿಕೊಂಡರು. ದೆಹಲಿ ಪೊಲೀಸರು ಕನಿಷ್ಠ 52 ಜನರನ್ನು ವಶಕ್ಕೆ ತೆಗೆದುಕೊಂಡರು, ಅವರೆಲ್ಲರನ್ನೂ ಗಂಟೆಗಳ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಶಾಹೀನ್ ಬಾಗ್ ಪ್ರತಿಭಟನೆಯ ಸ್ಥಳದಲ್ಲಿ ಹಾದು ಹೋಗಬೇಕಾದರೆ ಗುರುತಿನ ಚೀಟಿಗಳನ್ನು ತೋರಿಸುವಂತೆ ಕೇಳುತ್ತಾರೆ, ಕಟ್ಟುನಿಟ್ಟಾದ ತಪಾಸಣೆಗೆ ಒಳಪಡಿಸುತ್ತಾರೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.