ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಸ್ತರಣೆ ಫೆಬ್ರವರಿ 6 ರಂದು ನಡೆಯಲಿದೆ. ಅಂದು ರಾಜ ಭವನದಲ್ಲಿ ಬೆಳಿಗ್ಗೆ 10:30 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಲಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಬಿಜೆಪಿಗೆ ಸೇರಿದ 10 ಮಂದಿ ಸೇರಿದಂತೆ ಒಟ್ಟು 13 ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸಿಎಂ ನಿವಾಸ ಧವಳಗಿರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಸಿಎಂ ನಿವಾಸಕ್ಕೆ ಸಚಿವಾಕಾಂಕ್ಷಿಗಳು ಹಾಗೂ ಭಾವಿ ಸಚಿವರು ದೌಡಾಯಿಸುತ್ತಿದ್ದಾರೆ.
2019 ರ ಡಿಸೆಂಬರ್ ಉಪಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆದ್ದು ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಪಡೆದಾಗಿನಿಂದ ಸುಮಾರು ಎರಡು ತಿಂಗಳ ಕಾಲ ಸಂಪುಟ ವಿಸ್ತರಣೆ ಪ್ರಮುಖ ಕೇಂದ್ರ ಬಿಂದುವಾಗಿತ್ತು. ಹೆಚ್ಚು ವಿಳಂಬವಾದ ಕ್ಯಾಬಿನೆಟ್ ವಿಸ್ತರಣೆಯನ್ನು ಈಗಾಗಲೇ ಹಲವಾರು ಬಾರಿ ಮುಂದೂಡಲಾಗಿದೆ. ಇದೀಗ ಫೆ. 6 ಕ್ಕೆ ಡೇಟ್ ಫಿಕ್ಸ್ ಆಗಿದೆ.
ಫೆಬ್ರವರಿ 6 ರಂದು ಸಂಪುಟ ವಿಸ್ತರಣೆ ನಡೆಯಲಿದ್ದು ಬೆಳಗ್ಗೆ 10.30 ಕ್ಕೆ ರಾಜಭವನದಲ್ಲಿ 13 ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ದೃಢಪಡಿಸಿವೆ.
ಪ್ರಸ್ತುತ, ಮಂತ್ರಿಮಂಡಲದಲ್ಲಿ ಮುಖ್ಯಮಂತ್ರಿ ಸೇರಿದಂತೆ 18 ಮಂತ್ರಿಗಳಿದ್ದಾರೆ. ಒಟ್ಟು 34 ಸಚಿವ ಸಾಮರ್ಥ್ಯ ಇದೆ. ಹದಿನಾರು ಸ್ಥಾನಗಳು ಇನ್ನೂ ಖಾಲಿ ಇವೆ. ಯಡಿಯೂರಪ್ಪ ಭರವಸೆ ನೀಡಿದ ಎಲ್ಲಾ 11 ಮಂದಿ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಲು ಹೈಕಮಾಂಡ್ ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.