ನವದೆಹಲಿ: ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಉದ್ಯಾನವನ್ನು ಬುಧವಾರದಿಂದ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ. ರಾಷ್ಟ್ರಪತಿ ಭವನದ ವಾರ್ಷಿಕ ಉದ್ಯಾನೋತ್ಸವವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ಉದ್ಘಾಟಿಸಲಿದ್ದಾರೆ.
ಮುಂದಿನ ತಿಂಗಳು 8 ರವರೆಗೆ ಉದ್ಯಾನಗಳು ಸಾರ್ವಜನಿಕರಿಗೆ ತೆರೆದಿರುತ್ತವೆ ಮತ್ತು ಸಾರ್ವಜನಿಕರು ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ ಇಲ್ಲಿಗೆ ಭೇಟಿ ನೀಡಬಹುದು. ನಿರ್ವಹಣೆಯ ಕಾರಣಕ್ಕಾಗಿ ಸೋಮವಾರ ಉದ್ಯಾನಕ್ಕೆ ಜನರ ಪ್ರವೇಶವನ್ನು ನಿರಾಕರಿಸಲಾಗುತ್ತದೆ.
ತುಲಿಪ್ಸ್ ಮತ್ತು ವಿಭಿನ್ನ ಹೂವುಗಳ ಜೊತೆಗೆ ಈ ವರ್ಷದ ಉದ್ಯಾನೋತ್ಸವದ ಪ್ರಮುಖ ಆಕರ್ಷಣೆಯಾಗಿ ಬಲ್ಬಸ್ ಹೂವುಗಳು ಇರಲಿವೆ. ಮೊಘಲ್ ಗಾರ್ಡನ್ನಲ್ಲಿ ಸುಮಾರು 10 ಸಾವಿರ ತುಲಿಪ್ಗಳನ್ನು ವಿಶೇಷವಾಗಿ ಬೆಳೆಸಲಾಗುತ್ತದೆ ಮತ್ತು ಅವು ಕೆಂಪು, ಬಿಳಿ, ಕಿತ್ತಳೆ ಮತ್ತು ಹಳದಿ ಬಣ್ಣಗಳದ್ದಾಗಿದೆ.
ರಾಷ್ಟ್ರಪತಿ ಭವನದ ತೋಟಗಾರರ ಕೌಶಲ್ಯ ಮತ್ತು ಕರಕುಶಲತೆಯನ್ನು ಪ್ರದರ್ಶಿಸುವ ಭವ್ಯವಾದ ವಿನ್ಯಾಸವಾಗಿ ನವೀನ ಹೂವಿನ ಕಾರ್ಪೆಟ್ ಅನಾವರಣಗೊಳ್ಳಲಿದೆ, ಹುಲ್ಲುಹಾಸುಗಳು ಕೂಡ ಇಲ್ಲಿ ಪ್ರದರ್ಶನಗೊಳ್ಳಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.