ನವದೆಹಲಿ: ದೆಹಲಿಯ ಶಹೀನ್ ಬಾಗ್ ಮತ್ತು ಜಾಮಿಯಾದಲ್ಲಿ ನಡೆಯುತ್ತಿರುವ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮೌನ ಮುರಿದಿದ್ದಾರೆ. ಪ್ರತಿಭಟನೆಗಳ ಹಿಂದೆ ರಾಜಕೀಯ ಇದೆ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ. ಈ ಸಿಎಎ ವಿರೋಧಿ ಪ್ರತಿಭಟನೆಗಳು ಕಾಕತಾಳೀಯವಲ್ಲ, ಇವುಗಳು ಭಾರತವನ್ನು ವಿಭಜಿಸುವ ಮತ್ತು ರಾಷ್ಟ್ರದ ಸಾಮರಸ್ಯವನ್ನು ಹಾಳುಮಾಡುವ ಪಿತೂರಿ ಎಂದು ಪ್ರಧಾನಿ ಟೀಕಿಸಿದ್ದಾರೆ.
“ಕಳೆದ ಹಲವು ದಿನಗಳಿಂದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳು ಕಾಕತಾಳೀಯವಲ್ಲ. ಈ ಪ್ರತಿಭಟನೆಗಳು ಭಾರತವನ್ನು ವಿಭಜಿಸುವ ಪಿತೂರಿಯಾಗಿದೆ. ಇದರ ಹಿಂದೆ ರಾಜಕೀಯದ ಕೈವಾಡವಿದೆ, ಇದು ರಾಷ್ಟ್ರದ ಸಾಮರಸ್ಯವನ್ನು ಹಾಳುಮಾಡುವ ಹುನ್ನಾರ “ಎಂದು ಅವರು ಹೇಳಿದ್ದಾರೆ.
ದೆಹಲಿಯ ಕಾರ್ಕಾರ್ಡೂಮಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಾ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
“ಎಎಪಿ ಮತ್ತು ಕಾಂಗ್ರೆಸ್ ಜನರನ್ನು ಪ್ರಚೋದಿಸುತ್ತಿವೆ. ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ಮುಂದೆ ಇಡಲಾಗುತ್ತಿದೆ ಆದರೆ ಹಿಂದೆ ದೇಶವನ್ನು ಒಡೆಯುವ ಕಾರ್ಯವನ್ನು ಮಾಡಲಾಗುತ್ತದೆ. ಸಂವಿಧಾನ, ತ್ರಿವರ್ಣ ಧ್ವಜವನ್ನು ಮುಂದಿಟ್ಟುಕೊಂಡು ಪಿತೂರಿಯಿಂದ ಗಮನವನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ” ಎಂದು ಮೋದಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅನಧಿಕೃತ ಕಾಲೋನಿಗಳ ಅಭಿವೃದ್ಧಿಗೆ ಗುರಿಯಾಗಿಸಿ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರಧಾನಿ ತಮ್ಮ ಭಾಷಣದಲ್ಲಿ ಭರವಸೆ ನೀಡಿದರು. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ 2022 ರ ವೇಳೆಗೆ ಎಲ್ಲರಿಗೂ ವಸತಿ ಒದಗಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.