ನವದೆಹಲಿ: 2019ರ ಮೇ 30 ರಿಂದ 2020ರ ಜನವರಿ 20 ರವರೆಗೆ ಜಮ್ಮು ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಸಮೀಪ ಪಾಕಿಸ್ಥಾನವು 2,335 ಬಾರಿ ಕದನ ವಿರಾಮ ಉಲ್ಲಂಘನೆಗಳನ್ನು ಮಾಡಿದೆ. ಇದಲ್ಲದೆ, ಜಮ್ಮು ಪ್ರದೇಶದ ಇಂಡೋ-ಪಾಕ್ ಅಂತರರಾಷ್ಟ್ರೀಯ ಗಡಿಯಲ್ಲಿ ಮೇ 30, 2019, ಜನವರಿ 15, 2020 ರವರೆಗೆ 177 ಗಡಿಯಾಚೆಗಿನ ಗುಂಡಿನ ದಾಳಿಗಳು ನಡೆದಿದೆ.
2019 ರ ಮೇ 30 ರಿಂದ ಇಲ್ಲಿಯವರೆಗೆ ಒಟ್ಟು ಎಂಟು ಸೇನಾ ಸಿಬ್ಬಂದಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯದ ರಾಜ್ಯ ಖಾತೆ ಸಚಿವ ಶ್ರೀಪಾದ್ ನಾಯಕ್ ಸೋಮವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು.
ಜಮ್ಮು ಮತ್ತು ಕಾಶ್ಮೀರದ ತಂಗ್ಧಾರ್ ಸೆಕ್ಟರ್ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿದ ಪರಿಣಾಮ ಸೋಮವಾರ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಸಲೀಮ್ ಅವನ್ (60) ಎಂದು ಗುರುತಿಸಲಾಗಿದೆ.
ಪಾಕಿಸ್ಥಾನದ ಪಡೆಗಳು ಭಾರತವನ್ನು ಕೆಣಕಲು ಅಪ್ರಚೋದಿತ ಗುಂಡಿನ ದಾಳಿಯನ್ನು ಆಶ್ರಯಿಸುತ್ತಿವೆ ಮತ್ತು ಭಾರತೀಯ ಸೇನೆಯು ಸಾಕಷ್ಟು ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ಥಾನದ ಪಡೆಗಳ ಗುಂಡಿನ ದಾಳಿಯಲ್ಲಿ ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ ಎಂದಿದ್ದಾರೆ.
2019ರ ಆಗಸ್ಟ್-ಅಕ್ಟೋಬರ್ ತಿಂಗಳಿನಿಂದ ಪಾಕಿಸ್ಥಾನವು ಕಳೆದ ಮೂರು ತಿಂಗಳುಗಳಲ್ಲಿ ಜಮ್ಮು ಪ್ರದೇಶದ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ 950 ಕದನ ವಿರಾಮ ಉಲ್ಲಂಘನೆ ಮತ್ತು 79 ಸಿಎಫ್ವಿಗಳ ಘಟನೆಗಳನ್ನು ನಡೆಸಿವೆ. ಇದರಲ್ಲಿ ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆಯು ಕದನ ವಿರಾಮ ಉಲ್ಲಂಘನೆಗೆ ಸೂಕ್ತ ಪ್ರತಿಕಾರವನ್ನು ತೀರಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.