ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೇಲ್ವಿಚಾರಣೆಗೆ ಕೇಂದ್ರವು 15 ಸದಸ್ಯರ ಸ್ವತಂತ್ರ ಟ್ರಸ್ಟ್ ಅನ್ನು ರಚಿಸಿದೆ. ಸುಪ್ರೀಂಕೋರ್ಟ್ ನಿಗದಿಪಡಿಸಿದ ಮೂರು ತಿಂಗಳ ಗಡುವು ಮುಕ್ತಾಯಗೊಳ್ಳುವ ನಾಲ್ಕು ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಟ್ರಸ್ಟ್ನಲ್ಲಿ ವಕೀಲ ಕೆ. ಪರಸರನ್, ಜಗದ್ಗುರು ಶಂಕರಾಚಾರ್ಯ, ಜೋತಿಷ್ಯಪೀಠಾಧೀಶ್ವರ ಸ್ವಾಮಿ ವಾಸುದೇವನ್, ಅಲಹಾಬಾದಿನ ಸರಸ್ವತಿ ಜಿ. ಮಹಾರಾಜ್, ಉಡುಪಿ ಪೇಜಾವರದ ಮಠದ ಜಗದ್ಗುರು ಮಧ್ವಾಚಾರ್ಯ ಸ್ವಾಮಿ ವಿಶ್ವ ಪ್ರಸನ್ನತೀರ್ಥ ಜಿ ಮಹಾರಾಜ್, ಹರಿದ್ವಾರದ ಯುಗಪುರುಷ ಪರಮಾನಂದ ಜಿ ಮಹಾರಾಜ್, ಪುಣೆಯ ಸ್ವಾಮಿ ಗೋವಿಂದದೇವ್ ಗಿರಿ ಜಿ ಮಹಾರಾಜ್, ಅಯೋಧ್ಯೆಯ ವಿಮಲೇಂದ್ರ ಮೋಹನ್ ಜೀ ಮಹಾರಾಜ್ ಸೇರಿದಂತೆ 15 ಮಂದಿ ಟ್ರಸ್ಟಿನಲ್ಲಿ ಇದ್ದಾರೆ.
ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಾತನಾಡಿದ್ದ ಅವರು, “ದೇಶಕ್ಕೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕವಾದ ವಿಷಯದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲು ಬಯಸುತ್ತಿದ್ದೇವೆ. ಈ ವಿಷಯವು ಲಕ್ಷಾಂತರ ದೇಶವಾಸಿಗಳಂತೆ ನನ್ನ ಹೃದಯಕ್ಕೆ ಹತ್ತಿರವಾಗಿದೆ ಮತ್ತು ಅದರ ಬಗ್ಗೆ ಮಾತನಾಡುವುದು ನನ್ನ ದೊಡ್ಡ ಅದೃಷ್ಟವೆಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.
ಸಂಪುಟದ ನಿರ್ಧಾರವನ್ನು ದೆಹಲಿ ವಿಧಾನಸಭಾ ಚುನಾವಣೆಗೆ ಜೋಡಿಸುವುದು ತಪ್ಪಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಸರ್ಕಾರಕ್ಕೆ ಟ್ರಸ್ಟ್ ಘೋಷಿಸಲು ಅನುಮೋದನೆ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ಕಳೆದ ವರ್ಷ ನವೆಂಬರ್ 9 ರಂದು ನಡೆದ ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಅನುಗುಣವಾಗಿ ಸಂಪುಟ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮೋದಿ ಹೇಳಿದ್ದಾರೆ. ಕೇಂದ್ರಕ್ಕೆ ಟ್ರಸ್ಟ್ ರೂಪಿಸಲು ಮೂರು ತಿಂಗಳ ಗಡುವನ್ನು ಸುಪ್ರೀಂಕೋರ್ಟ್ ನೀಡಿತ್ತು.
“ಸುಪ್ರೀಂಕೋರ್ಟ್ನ ನಿರ್ದೇಶನದ ಆಧಾರದ ಮೇಲೆ ನನ್ನ ಸರ್ಕಾರ ಇಂದು ಅಯೋಧ್ಯೆಯಲ್ಲಿ ಭಗವಾನ್ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸುವ ವಿಶಾಲ ಯೋಜನೆಗೆ ಅನುಮೋದನೆ ನೀಡಿದೆ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಸ್ವತಂತ್ರ ಟ್ರಸ್ಟ್ ಅನ್ನು ರಚಿಸಿದೆ. ಈ ಟ್ರಸ್ಟ್ ಮಂದಿರ ನಿರ್ಮಾಣವನ್ನು ನೋಡಿಕೊಳ್ಳಲಿದೆ ”ಎಂದು ಪ್ರಧಾನಿ ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.