ನವದೆಹಲಿ: ಆಗಸ್ಟ್ ತಿಂಗಳಿನಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಗಳ ಸಾವಿನ ಪ್ರಮಾಣದಲ್ಲಿ ಶೇ. 73ರಷ್ಟು ಕುಸಿತ ಕಂಡುಬಂದಿದೆ ಎಂದು ಗೃಹ ಸಚಿವಾಲಯ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಆಗಸ್ಟ್ 2019 ರಿಂದ ಜಮ್ಮು ಕಾಶ್ಮೀರದಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ 444 ಜನರ ವಿರುದ್ಧ ಬಂಧನ ಆದೇಶ ಹೊರಡಿಸಲಾಗಿದೆ ಮತ್ತು ಜಮ್ಮು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ 389 ಮಂದಿ ಇನ್ನೂ ಬಂಧನದಲ್ಲಿದ್ದಾರೆ ಎಂದು ಹೇಳಿದೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಸಚಿವ ಜಿ. ಕಿಶನ್ ರೆಡ್ಡಿ ಅವರು, “2019 ರ ಆಗಸ್ಟ್ 5 ಮತ್ತು 2020 ರ ಜನವರಿ 24 ರ ನಡುವಿನ 173 ದಿನಗಳ ಅವಧಿಯಲ್ಲಿ 22 ಭದ್ರತಾ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಖ್ಯೆ 2019ರ ಫೆಬ್ರವರಿ 13 ರಿಂದ 2019ರ ಆಗಸ್ಟ್ 4ರವರೆಗೆ 173 ದಿನಗಳ ಅವಧಿಯಲ್ಲಿ 82 ಆಗಿತ್ತು” ಎಂದಿದ್ದಾರೆ.
ಮತ್ತೊಂದು ಸಂಬಂಧಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ರೆಡ್ಡಿ,” ಆಗಸ್ಟ್ 5, 2019 ರಿಂದ 32 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ, 10 ಭಯೋತ್ಪಾದಕರನ್ನು ಬಂಧಿಸಲಾಗಿದೆ. 19 ನಾಗರಿಕರು ಭಯೋತ್ಪಾದಕ ದಾಳಿಯಲ್ಲಿ ಅಥವಾ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಗಳ ಸಮಯದಲ್ಲಿ ಮೃತಪಟ್ಟಿದ್ದಾರೆ” ಎಂದು ಮಾಹಿತಿಯನ್ನು ನೀಡಿದ್ದಾರೆ.
ಪ್ರಕರಣಗಳ ಆಧಾರದ ಮೇಲೆ ನಿಯಮಿತ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ ಮತ್ತು ಫೀಲ್ಡ್ ಏಜೆನ್ಸಿಗಳ ವರದಿ ಮತ್ತು ಪ್ರದೇಶದ ಪರಿಸ್ಥಿತಿಗೆ ಅನುಗುಣವಾಗಿ ಬಂಧನ ವಿಸ್ತರಣೆ ಅಥವಾ ಖುಲಾಸೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.