ನವದೆಹಲಿ: ರಕ್ಷಣಾ ಮತ್ತು ಭದ್ರತಾ ವಲಯಗಳು ಸೇರಿದಂತೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯದ ಸಂಪೂರ್ಣ ಆಯಾಮವನ್ನು ಒಳಗೊಂಡಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ಶನಿವಾರ ಮಹತ್ವದ ಮಾತುಕತೆಯನ್ನು ನಡೆಸಿದರು.
ಶ್ರೀಲಂಕಾದ ಅಧ್ಯಕ್ಷ ಗೋತಬಯಾ ರಾಜಪಕ್ಷೆ ಅವರ ಹಿರಿಯ ಸಹೋದರನಾಗಿರುವ ಮಹಿಂದಾ ರಾಜಪಕ್ಷ ಅವರು ಐದು ದಿನಗಳ ಭೇಟಿಗಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದರು. ಕಳೆದ ವರ್ಷ ನವೆಂಬರ್ನಲ್ಲಿ ದ್ವೀಪ ರಾಷ್ಟ್ರದ ಪ್ರಧಾನಿಯಾಗಿ ನೇಮಕಗೊಂಡ ನಂತರ ಅವರ ಮೊದಲ ವಿದೇಶ ಪ್ರವಾಸ.
ಇಬ್ಬರು ಪ್ರಧಾನ ಮಂತ್ರಿಗಳ ನಡುವಿನ ಮಾತುಕತೆಯು ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ದ್ವಿಪಕ್ಷೀಯ ಸಮಸ್ಯೆಗಳು, ರಕ್ಷಣಾ ಮತ್ತು ಭದ್ರತಾ ವಿಷಯಗಳು ಒಳಗೊಂಡಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾದ ಪ್ರಧಾನ ಮಂತ್ರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮಹಿಂದಾ ರಾಜಪಕ್ಷೆ 2005-2015 ರ ವರೆಗೆ ಶ್ರೀಲಂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು, ದಕ್ಷಿಣ ಏಷ್ಯಾದಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಯಕರಲ್ಲಿ ಒಬ್ಬರು ಎಂಬ ಕೀರ್ತಿ ಅವರದ್ದು. ಅವರು 2018 ರಲ್ಲಿ ಅಲ್ಪಾವಧಿಗೆ ಪ್ರಧಾನಿಯಾಗಿದ್ದರು.
ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಚೀನಾ ಹಿಂದೂ ಮಹಾಸಾಗರ ದ್ವೀಪ ರಾಷ್ಟ್ರದಲ್ಲಿ ತನ್ನ ಹೆಜ್ಜೆಗುರುತುಗಳನ್ನು ವಿಸ್ತರಿಸುವುದನ್ನು ಪ್ರಾರಂಭಿಸಿತ್ತು, ಇದು ಭಾರತದಲ್ಲಿ ಕಳವಳಕ್ಕೆ ಕಾರಣವಾಗಿತ್ತು.
ಆದರೂ, ಕಳೆದ ನಾಲ್ಕು ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳು ಏರಿಕೆಯಾಗುತ್ತಲೇ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.