ನವದೆಹಲಿ: ನಿರ್ಭಯಾ ಪ್ರಕರಣದ ಆರೋಪಿಗಳು ತಮಗೆ ನಿಗದಿಯಾಗಿರುವ ಮರಣದಂಡನೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಂಗ ಪ್ರಕ್ರಿಯೆಯನ್ನೇ ಅಪಹಾಸ್ಯಕ್ಕೀಡು ಮಾಡುತ್ತಿದ್ದಾರೆ. ಹೀಗಾಗಿ ಮರಣದಂಡನೆ ಜಾರಿಗೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ಗೆ ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ಕೇಂದ್ರದ ಮನವಿಯನ್ನು ಪರಿಶೀಲಿಸಲು ಫೆಬ್ರವರಿ 11ಕ್ಕೆ ದಿನಾಂಕ ನಿಗದಿಪಡಿಸಿದೆ. ಇನ್ನೊಂದೆಡೆ ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಕಾನೂನು ಪ್ರಕ್ರಿಯೆಗಳನ್ನು ನಿವಾರಿಸಲು ಒಂದು ವಾರದ ಅವಧಿ ನೀಡಿದೆ.
ನ್ಯಾಯಮೂರ್ತಿ ಆರ್. ಬಾನುಮತಿ ನೇತೃತ್ವದ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎ. ಎಸ್. ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠವು ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸಲ್ಲಿಸಿದ ಮನವಿಯ ಬಗ್ಗೆ ಸಂಕ್ಷಿಪ್ತ ವಿಚಾರಣೆಯನ್ನು ನಡೆಸಿದೆ.
ಎಲ್ಲಾ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಮತ್ತು ಪ್ರತ್ಯೇಕವಾಗಿ ಅಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದಕ್ಕೂ ಕೇಂದ್ರ ಸವಾಲು ಹಾಕಿದೆ. ಒಂದು ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ದೃಢಪಡಿಸಲು ನ್ಯಾಯಪೀಠ ಕಾನೂನು ರೂಪಿಸಬೇಕಾಗುತ್ತದೆ ಎಂದು ಮೆಹ್ತಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.