ನವದೆಹಲಿ: ಭಾರತೀಯ ರಕ್ಷಣಾ ವಿಶ್ವವಿದ್ಯಾಲಯ (CDS)ವನ್ನು ಸ್ಥಾಪಿಸುವ ನಿಟ್ಟಿನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ರಕ್ಷಣಾ ವಿಶ್ವವಿದ್ಯಾಲಯದ ಸ್ಥಾಪನೆ ಕುರಿತ ಕರಡು ಮಸೂದೆ ಅಂಗೀಕಾರಕ್ಕಾಗಿ ಅಧಿಕಾರಿಗಳು ಈಗ ಸಿಡಿಎಸ್ ರಾವತ್ ಅವರ ಕಚೇರಿ ಮತ್ತು ಅಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯಿಂದ ಅನುಮೋದನೆ ಪಡೆಯಲು ಮುಂದಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಭಾರತೀಯ ರಕ್ಷಣಾ ವಿಶ್ವವಿದ್ಯಾಲಯ ಸ್ಥಾಪಿಸುವ ಯೋಜನೆಯನ್ನು 53 ವರ್ಷಗಳ ಹಿಂದೆಯೇ ಪ್ರಸ್ತಾಪಿಸಲಾಗಿತ್ತು, ಭಾರತದ ಭದ್ರತಾ ನಿರ್ವಹಣೆಯಲ್ಲಿನ ನ್ಯೂನತೆಗಳನ್ನು ಪರಿಹರಿಸುವ ಮತ್ತು ಕಾರ್ಯತಂತ್ರದ ಸವಾಲುಗಳ ಕುರಿತು ನೀತಿಗಳನ್ನು ರೂಪಿಸುವ ಸಂಸ್ಥೆಯಾಗಿ ಇದನ್ನು ನಿರ್ಮಾಣ ಮಾಡುವ ಉದ್ದೇಶವಿತ್ತು.
ನಂತರ 2013 ರಲ್ಲಿ, 2014 ರ ಸಾರ್ವತ್ರಿಕ ಚುನಾವಣೆಗೂ ತಿಂಗಳುಗಳ ಮುಂಚೆ ಈ ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಲಾಯಿತು. ಇದರ ಸ್ಥಾಪನೆಯು ಸಿಡಿಎಸ್ ರಾವತ್ ಅವರ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ.
ಇದೀಗ ಈ ಕಾರ್ಯವನ್ನು ಅನುಷ್ಠಾನಕ್ಕೆ ತರಲು, ಸಿಡಿಎಸ್ ಕಚೇರಿಯು ರಾಷ್ಟ್ರದ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿಶ್ವವಿದ್ಯಾಲಯದ ಕುರಿತ ವಿಸ್ತೃತ ವಿವರವನ್ನು ತಿಳಿಸಲು ದಿನಾಂಕವನ್ನು ಅಂತಿಮಗೊಳಿಸುತ್ತಿದೆ. ಈ ನಡುವೆ, ಒಮ್ಮೆ ಸ್ಥಾಪಿಸಲಾದ ಐಡಿಯು ಸಿಡಿಎಸ್ ನೇತೃತ್ವದ ಮಿಲಿಟರಿ ವ್ಯವಹಾರಗಳ ಇಲಾಖೆಯ ಆಡಳಿತಕ್ಕೆ ಬರುವುದಿಲ್ಲ, ಆದರೆ ರಕ್ಷಣಾ ಕಾರ್ಯದರ್ಶಿ ನೇತೃತ್ವದ ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುತ್ತದೆ ಎಂಬುದು ಗಮನಾರ್ಹವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.