ನವದೆಹಲಿ: ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ) ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಈ ಪಕ್ಷದ ಮುಖಂಡ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ಅವರು ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಜಾರ್ಖಂಡ್ ಬಿಜೆಪಿ ಉಸ್ತುವಾರಿ ಓಂ ಮಾಥುರ್ ಕೂಡ ಉಪಸ್ಥಿತರಿದ್ದರು.
ಫೆಬ್ರವರಿ 17 ರಂದು ರಾಂಚಿಯಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಜೆವಿಎಂ ಔಪಚಾರಿಕವಾಗಿ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಉಪಸ್ಥಿತರಿರಲಿದ್ದಾರೆ.
ಇದಕ್ಕೂ ಮುನ್ನ ಫೆಬ್ರವರಿ 7 ರಂದು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಾಬುಲಾಲ್ ಮರಂಡಿ ಅವರು ತಮ್ಮ ಪಕ್ಷದ ಶಾಸಕ ಪ್ರದೀಪ್ ಯಾದವ್ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ಪಕ್ಷದಿಂದ ಹೊರಹಾಕಲ್ಪಟ್ಟ ಎರಡನೇ ಶಾಸಕರು ಇವರಾಗಿದ್ದಾರೆ. ಇದಕ್ಕೂ ಮುನ್ನ ಜನವರಿ 21ರಂದು ಶಾಸಕ ಬಂಧು ಟಿರ್ಕಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು.
ಜಾರ್ಖಂಡ್ನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆವಿಎಂ-ಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಇದರಲ್ಲಿ ಬಾಬುಲಾಲ್ ಮರಂಡಿ, ಪ್ರದೀಪ್ ಯಾದವ್ ಮತ್ತು ಬಂಧು ಟಿರ್ಕಿ ಸೇರಿದ್ದಾರೆ. ಯಾದವ್ ಮತ್ತು ಟಿರ್ಕಿ ಇಬ್ಬರೂ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಲೀನ ಪ್ರಸ್ತಾಪವನ್ನು ಚರ್ಚಿಸಲು ಜೆವಿಎಂ ಫೆಬ್ರವರಿ 11 ರಂದು ಪಕ್ಷದ ಮುಖಂಡರ ಸಭೆ ಕರೆದಿದೆ.
ಜಾರ್ಖಂಡ್ನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿದ್ದ ಬಾಬುಲಾಲ್ ಮರಂಡಿ ಅವರು 2006 ರಲ್ಲಿ ಪಕ್ಷವನ್ನು ತೊರೆದು ಹೊಸ ಪಕ್ಷವನ್ನು ರಚನೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.