ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಟ್ನಾದ ಮಹಾವೀರ್ ದೇವಸ್ಥಾನವು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುಕ್ಕಾಗಿ 10 ಕೋಟಿ ರೂಪಾಯಿಗಳ ಕೊಡುಗೆಯನ್ನು ನೀಡಿದೆ. ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಸುಮಾರು ಮೂರು ತಿಂಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ರಾಮ ದೇಗುಲ ಟ್ರಸ್ಟ್ ರಚಿಸುವುದಾಗಿ ಬುಧವಾರ ಘೋಷಿಸಿದ್ದರು. ಈ ನಂತರ ಮಹಾವೀರ್ ದೇಗುಲ ಕೊಡುಗೆಯನ್ನು ಘೋಷಣೆ ಮಾಡಿದೆ.
ಮಹಾವೀರ್ ಮಂದಿರ ಟ್ರಸ್ಟ್ನ ಕಾರ್ಯದರ್ಶಿ ಕಿಶೋರ್ ಕುನಾಲ್ ಅವರು ಈ ಮೊತ್ತವನ್ನು ಕಂತುಗಳಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ, 1818 ರಲ್ಲಿ ಮುದ್ರಿಸಿದ 30 ನಾಣ್ಯಗಳು ದೇವಾಲಯದ ದಾನ ಹುಂಡಿಯಲ್ಲಿ ಕಂಡುಬಂದಿವೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.
“ನಾನು ಪಾಟ್ನಾದ ಮಹಾವೀರ್ ದೇವಸ್ಥಾನದಿಂದ ಪ್ರಸ್ತಾಪಿತ ರಾಮ ಮಂದಿರಕ್ಕೆ ದೇಣಿಗೆಯಾಗಿ 2 ಕೋಟಿ ರೂ.ಗಳ ಚೆಕ್ ಅನ್ನು ನೀಡಲು ಅಯೋಧ್ಯೆಗೆ ಹೋಗುತ್ತಿದ್ದೇನೆ. ನಾವು ಒಟ್ಟು 10 ಕೋಟಿ ರೂಪಾಯಿಗಳನ್ನು ಕಂತುಗಳಲ್ಲಿ ನೀಡಲಿದ್ದೇವೆ” ಎಂದು ಮಹಾವೀರ್ ಮಂದಿರ ಟ್ರಸ್ಟ್ ಕಾರ್ಯದರ್ಶಿ ಕಿಶೋರ್ ಕುನಾಲ್ ಹೇಳಿದ್ದಾರೆ.
“ಮಹಾವೀರ್ ದೇವಸ್ಥಾನದಲ್ಲಿ ದೇಣಿಗೆ ಹುಂಡಿಯನ್ನು ತೆರೆದ ನಂತರ 1818ರ 30 ನಾಣ್ಯಗಳು ನಮಗೆ ಸಿಕ್ಕವೆ. ಇವುಗಳನ್ನು 1818 ರಲ್ಲಿ ಈಸ್ಟ್ ಇಂಡಿಯಾ ಕಂಪನಿ ಬಿಡುಗಡೆ ಮಾಡಿತ್ತು. ಇದರಲ್ಲಿ ಶ್ರೀ ರಾಮ, ಸೀತಾ, ಲಕ್ಷ್ಮಣ ಮತ್ತು ಹನುಮಾನ್ ಚಿತ್ರಗಳನ್ನು ಒಂದು ಬದಿಯಲ್ಲಿ ಕೆತ್ತಲಾಗಿದೆ” ಎಂದು ಕುನಾಲ್ ಹೇಳಿದ್ದಾರೆ. ದೇಣಿಗೆ ಹುಂಡಿಯಲ್ಲಿ ಸಿಕ್ಕ ನಾಣ್ಯಗಳನ್ನು ಸ್ವೀಕರಿಸಲಾಗಿದ್ದು, ದೇವಾಲಯಕ್ಕಾಗಿ ಇದನ್ನು ಇಡಲಾಗುವುದು ಎಂದು ಅವರು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಟ್ರಸ್ಟ್ ಅನ್ನು ಸ್ಥಾಪನೆ ಮಾಡಿ ಅಯೋಧ್ಯಾದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಪ್ರಕ್ರಿಯೆಯನ್ನು ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.