ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿಯ ಶಹೀನ್ ಭಾಗ್ನಲ್ಲಿ ನಡೆಯುತ್ತಿರುವ ದೀರ್ಘಕಾಲದ ಪ್ರತಿಭಟನೆಯಲ್ಲಿ ಮೃತಪಟ್ಟ 4 ತಿಂಗಳ ಮಗುವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
“ನಾಲ್ಕು ದಿನಗಳ ಮಗು ಕೂಡ ಪ್ರತಿಭಟನೆಗೆ ತೆರಳಿತ್ತೇ?” ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ.
ಪೋಷಕರು ನಿತ್ಯ ತಮ್ಮ ನಾಲ್ಕು ತಿಂಗಳ ಮಗುವನ್ನು ಶಹೀನ್ ಭಾಗ್ ಪ್ರತಿಭಟನೆಗೆ ಕರೆದುಕೊಂಡು ಹೋಗುತ್ತಿದ್ದರು, ಅಲ್ಲಿ ತೀವ್ರ ಚಳಿಯ ಹೊಡೆತಕ್ಕೆ ಅನಾರೋಗ್ಯಕ್ಕೆ ಒಳಗಾದ ಮಗು ಮೃತಪಟ್ಟಿದೆ.
ದೆಹಲಿಯ ಶಹೀನ್ ಬಾಗ್ ಅನ್ನು ಪ್ರತಿಭಟನಾಕಾರರಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಯಾವುದೇ ನಿರ್ದೇಶನವನ್ನು ರವಾನಿಸುವುದಿಲ್ಲ ಎಂದು ಹೇಳಿದೆ. ಈ ವಿಷಯವನ್ನು ಮುಂದಿನ ವಿಚಾರಣೆಗೆ ಫೆಬ್ರವರಿ 17 ರಂದು ಮುಂದೂಡಿದೆ.
ಜನರು ಪ್ರತಿಭಟಿಸಲು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯವು ಸಮರ್ಥಿಸಿಕೊಂಡಿದೆ. ಆದರೆ ಪ್ರತಿಭಟನೆಗಾಗಿ ಒಂದು ಪ್ರದೇಶವನ್ನು ಗೊತ್ತುಪಡಿಸಬೇಕು, ಇಡೀ ರಸ್ತೆ ಅಥವಾ ನಗರವನ್ನು ಪ್ರತಿಭಟನೆಗಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ವಿಚಾರಣೆಯ ಸಮಯದಲ್ಲಿ ಹೇಳಿದೆ.
ಶಹೀನ್ ಬಾಗ್ನಿಂದ ಪ್ರತಿಭಟನಾಕಾರರನ್ನು ತೆಗೆದುಹಾಕುವಂತೆ ಕೋರಿ ನ್ಯಾಯಾಲಯವು ಇಂದು ಕೇಂದ್ರ, ದೆಹಲಿ ಸರ್ಕಾರ ಮತ್ತು ರಾಜ್ಯ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಒಂದು ವಾರದೊಳಗೆ ಈ ಕುರಿತು ಉತ್ತರ ಕೋರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.