ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇವಾಲಯವನ್ನು ರಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ರಸ್ಟ್ ಅನ್ನು ರಚನೆ ಮಾಡಿ ಸದಸ್ಯರನ್ನು ಈಗಾಗಲೇ ನೇಮಕ ಮಾಡಿದ್ದಾರೆ. ಟ್ರಸ್ಟ್ ಸದಸ್ಯರು ಕಾರ್ಯಪ್ರವೃತ್ತರಾಗಿದ್ದು, ಮಂದಿರ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.
‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಹೆಸರಿನ ಟ್ರಸ್ಟ್ನ ಸದಸ್ಯರು ಫೆಬ್ರವರಿ 19 ರಂದು ನವದೆಹಲಿಯಲ್ಲಿ ಮೊದಲ ಸಭೆ ನಡೆಸಲಿದ್ದಾರೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್ ಸದಸ್ಯ ಕಾಮೇಶ್ವರ ಚೌಪಾಲ್ ಅವರು, “ನಾವು ಸಮರ್ಪಕವಾದ ರೀತಿಯಲ್ಲಿ ಸಭೆ ನಡೆಸುತ್ತೇವೆ, ಎಲ್ಲರೂ ಸಭೆಗೆ ಒಪ್ಪಿಗೆ ನೀಡಿದ್ದಾರೆ, ಇದು ಅನೌಪಚಾರಿಕ ಸಭೆ” ಎಂದು ಹೇಳಿದ್ದಾರೆ.
ದೇವಾಲಯದ ನಿರ್ಮಾಣದಲ್ಲಿ ಉತ್ತಮ ತಂತ್ರಜ್ಞಾನದ ಬಳಕೆಯನ್ನು ಟ್ರಸ್ಟ್ ಖಚಿತಪಡಿಸುತ್ತದೆ ಎಂದು ಒತ್ತಿಹೇಳಿರುವ ಚೌಪಾಲ್, ಇಡೀ ಪ್ರಕ್ರಿಯೆಯು ಅಂತಿಮ ಘಟ್ಟ ತಲುಪಲು ಕನಿಷ್ಠ ನಾಲ್ಕೈದು ವರ್ಷಗಳು ತೆಗೆದುಕೊಳ್ಳುತ್ತದೆ ಎಂದರು.
ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಈಗಿನ ಸಿಜೆಐ ಶರದ್ ಅರವಿಂದ್ ಬೊಬ್ಡೆ ಅವರನ್ನೂ ಒಳಗೊಂಡ ಭಾರತದ ಸರ್ವೋಚ್ಚ ನ್ಯಾಯಾಲಯದ ಐದು ನ್ಯಾಯಾಧೀಶರ ಪೀಠದ ಸೂಚನೆಯ ಮೇರೆಗೆ ಭಾರತ ಸರ್ಕಾರವು ಈ ಟ್ರಸ್ಟ್ ಅನ್ನು ರಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.