ನವದೆಹಲಿ: ನೇಮಕಾತಿಗಳಲ್ಲಿ ಮೀಸಲಾತಿ ನೀಡಲು ರಾಜ್ಯಗಳು ಬದ್ಧವಾಗಿಲ್ಲ ಮತ್ತು ಬಡ್ತಿಗಳಲ್ಲಿ ಕೋಟಾ ಪಡೆಯುವುದು ಯಾವುದೇ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪು ಇಂದು ಲೋಕಸಭೆಯಲ್ಲಿ ದೊಡ್ಡ ಮಟ್ಟದ ಕೋಲಾಹಲವನ್ನು ಸೃಷ್ಟಿಸಿತು. ಕಾಂಗ್ರೆಸ್ ಸದಸ್ಯರುಗಳು ಈ ವಿಷಯದಲ್ಲಿ ಕೇಂದ್ರದ ಮೇಲೆ ಗೂಬೆ ಹೊರಿಸುವ ಪ್ರಯತ್ನವನ್ನು ನಡೆಸಿದರು.
ಪ್ರತಿಪಕ್ಷಗಳ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರು, ಸುಪ್ರೀಂ ಕೋರ್ಟ್ನ ತೀರ್ಪಿಗೂ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
“ಕೇಂದ್ರ ಈ ವಿಚಾರದಲ್ಲಿ ಕಕ್ಷಿಯಾಗಿರಲಿಲ್ಲ, ಯಾವುದೇ ಘೋಷಣೆಯನ್ನು ಮಂಡಿಸುವಂತೆ ನಮ್ಮನ್ನು ಕೇಳಲಾಗಿಲ್ಲ. 2012 ರಲ್ಲಿ ಉತ್ತರಾಖಂಡ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದಾಗಿ ಈ ವಿಷಯ ಉದ್ಭವಿಸಿದೆ. ಆ ಸಮಯದಲ್ಲಿ ಆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು ”ಎಂದು ಗೆಹ್ಲೋಟ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಆರೋಪವನ್ನು ತಿರಸ್ಕರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, “ಇದು ಸುಪ್ರೀಂಕೋರ್ಟ್ ತೀರ್ಪು ಮತ್ತು ಸರ್ಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.
2012ರಲ್ಲಿ ಈ ವಿಷಯ ನ್ಯಾಯಾಲಯಕ್ಕೆ ಬಂದಾಗ ಕಾಂಗ್ರೆಸ್ ಸರ್ಕಾರ ಇತ್ತು ಎಂದು ಜೋಶಿ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.