ನವದೆಹಲಿ: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ ಪರಿವಾರ, ತಳವಾರ ಮತ್ತು ಸಿದ್ಧಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಗೊಂಡಿದೆ. ಸಂವಿಧಾನದ ಪರಿಶಿಷ್ಟ ಪಂಗಡ ಆದೇಶ ಎರಡನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಇಂದು ಅಂಗೀಕಾರವನ್ನು ನೀಡಲಾಯಿತು.
ರಾಜ್ಯಸಭೆಯಲ್ಲಿ ಈ ಮಸೂದೆಗೆ ಕಳೆದ ಡಿಸೆಂಬರ್ 12ರಂದು ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ದೊರಕಿತ್ತು.
ಈ ಮಸೂದೆಯನ್ನು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರು ಮಂಡನೆಗೊಳಿಸಿದರು, ವಿರೋಧ ಪಕ್ಷಗಳ ಸದಸ್ಯರುಗಳು ಕೂಡ ಮಸೂದೆಯನ್ನು ಸ್ವಾಗತಿಸಿದರು.
ಬಜೆಟ್ ಅಧಿವೇಶನದ ಮೊದಲ ಹಂತದ ಕೊನೆಯ ದಿನ ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆತಿದ್ದು ರಾಷ್ಟ್ರಪತಿಯವರ ಅನುಮೋದನೆ ಬಾಕಿ ಇದೆ.
ಮಸೂದೆ ಕುರಿತು ಕನ್ನಡದಲ್ಲೇ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಸಮುದಾಯದ ಜನರು 36 ವರ್ಷಗಳ ಹಿಂದೆಯೇ ಸಲ್ಲಿಸಿದ ಬೇಡಿಕೆ ಈಗ ಈಡೇರಿದೆ ಎಂದಿದ್ದಾರೆ.
“ಈ ಕಾಯ್ದೆಗಾಗಿ ಅನೇಕರು ಹೋರಾಟ ನಡೆಸಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಈ ಕಾಯ್ದೆ ಅಂಗೀಕಾರಗೊಂಡ ಅಭಿನಂದನೆಗೆ ಅರ್ಹರಾಗಿದ್ದಾರೆ. ಹಾಗೂ ಸಂಸದರೆಲ್ಲರೂ ಕೂಡ ಅಭಿನಂದನೆಗೆ ಅರ್ಹರು” ಎಂದಿದ್ದಾರೆ.
In Lok Sabha spoke on the bill introduced to include Parivara & Talavara to the ST (Scheduled Tribes) list. (1)
Thank you @narendramodi ji, @AmitShah ji, @JoshiPralhadji, Sir @BSYBJP ji pic.twitter.com/mZnz1SkyzC— Pratap Simha (@mepratap) February 11, 2020
In Lok Sabha spoke on the bill introduced to include Parivara & Talavara to the ST (Scheduled Tribes) list. (2)
Thank you @narendramodi ji, @AmitShah ji, @JoshiPralhadji Sir , @BSYBJP ji pic.twitter.com/fmAhkr3fnX— Pratap Simha (@mepratap) February 11, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.