ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ 11 ಮಂದಿಗೆ ಉತ್ತರಪ್ರದೇಶದ ಸಂಭಾಲ್ ಜಿಲ್ಲಾಡಳಿತ ನೋಟಿಸ್ ಜಾರಿಗೊಳಿಸಿದ್ದು, ಭವಿಷ್ಯದಲ್ಲಿ ಇಂತಹ ಗಲಭೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಲಾ 50 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ಗೆ ಸಹಿ ಹಾಕುವಂತೆ ತಿಳಿಸಿದೆ.
ಪೊಲೀಸ್ ವರದಿಯ ಆಧಾರದ ಮೇಲೆ ಸಿಆರ್ಪಿಸಿ ಸೆಕ್ಷನ್ 111 ರ ಅಡಿಯಲ್ಲಿ (ಶಾಂತಿ ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ಮ್ಯಾಜಿಸ್ಟ್ರೇಟ್ ಆದೇಶ) ನೋಟಿಸ್ ಕಳುಹಿಸಲಾಗಿದೆ.
ನಖಾಸಾ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಶ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಈ 11 ಜನರು ಹಿಂಸಾಚಾರದಲ್ಲಿ ಭಾಗಿಯಾಗಬಹುದೆಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಆದ್ದರಿಂದ 50 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಒಂದೇ ಮೊತ್ತಕ್ಕೆ ಎರಡು ಜಾಮೀನುಗಳನ್ನು ಪ್ರತಿಯೊಬ್ಬರಿಂದ ತೆಗೆದುಕೊಳ್ಳಬೇಕು ಎಂದು ನೋಟಿಸಿನಲ್ಲಿ ತಿಳಿಸಲಾಗಿದೆ” ಎಂದಿದ್ದಾರೆ.
ಶೀಘ್ರದಲ್ಲೇ ಇತರ 24 ಜನರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಕಳೆದ ತಿಂಗಳಿನಿಂದ ಸುಮಾರು 500 ಮಹಿಳೆಯರು ನಖಾಸಾ ಪೊಲೀಸ್ ಠಾಣೆ ಪ್ರದೇಶದ ಹುಸೇನಾ ಬಾಗ್ ಬಳಿಯ ಜಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಡಿಸೆಂಬರ್ 19 ಮತ್ತು 20 ರಂದು ಸಂಭಾಲ್ನಲ್ಲಿ ಪೌರತ್ವ ಕಾನೂನನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 12 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, 43 ಜನರನ್ನು ಬಂಧಿಸಲಾಗಿದೆ. ಕೆಲವು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.