ನವದೆಹಲಿ : ನಮ್ಮ ಸರಕಾರದ ಎರಡನೇ ಅವಧಿಯ ಮೊದಲ ಕೆಲವು ತಿಂಗಳಲ್ಲಿ ತೆಗೆದುಕೊಂಡ ನಿರ್ಧಾರಗಳು ಭಾರತವನ್ನು ಪ್ರಗತಿಪಥದತ್ತ ಕೊಂಡೊಯ್ಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ಟಿವಿ ಮಾಧ್ಯಮವೊಂದು ಆಯೋಜಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ 8 ತಿಂಗಳ ಸರಕಾರವು ಶತಕ ಬಾರಿಸಿದಂತಹ ಸಾಧನೆ ಮಾಡಿದೆ ಎಂದಿದ್ದಾರೆ.
ದೇಶದಲ್ಲಿ ಆಗುತ್ತಿರುವ ಬದಲಾವಣೆಗಳು ಸಮಾಜಕ್ಕೆ ಹೊಸ ಆತ್ಮವಿಶ್ವಾಸವನ್ನು ನೀಡಿದೆ ಮತ್ತು ಬಡವರಿಗೆ ಇಂದು ತಮ್ಮ ಜೀವನ ಗುಣಮಟ್ಟ ಸುಧಾರಣೆಯಾಗಲಿದೆ ಎಂಬ ಭರವಸೆ ಮೂಡಿದೆ. ತಾವು ಉದ್ಯೋಗದಾತರಾಗುತ್ತೇವೆ ಎಂಬ ವಿಶ್ವಾಸ ಯುವ ಜನರಲ್ಲಿ ಮೂಡಿದೆ, ಎಲ್ಲ ವಲಯದಲ್ಲೂ ತಾವು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲಿದ್ದೇವೆ ಎಂಬ ಭರವಸೆ ಮಹಿಳೆಯರಲ್ಲಿ ಮೂಡಿದೆ ಎಂದಿದ್ದಾರೆ.
ದಶಕಗಳಷ್ಟು ಹಳೆಯದಾದ ಎಲ್ಲಾ ಸಮಸ್ಯೆಗಳನ್ನು ಹಿಂದಿಕ್ಕಿ ಭಾರತ ಇಂದು ಮುಂದೆ ಸಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಆರ್ಥಿಕತೆಯ ಬಗ್ಗೆ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ. ಆದರೆ ಈ ಗುರಿ ಅಷ್ಟು ಸುಲಭದ್ದಲ್ಲ, ಆದರೆ ಅಸಾಧ್ಯವಾದದ್ದು ಅಲ್ಲ ಎಂದಿದ್ದಾರೆ. ಉತ್ಪಾದನೆ ಮತ್ತು ರಫ್ತಿಗೆ ಹೆಚ್ಚಿನ ಉತ್ತೇಜನವನ್ನು ನೀಡಲು ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯನ್ನು ಇಟ್ಟುಕೊಳ್ಳಬೇಕಾದದ್ದು ಅತ್ಯವಶ್ಯಕ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.