ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರದಿಂದ ಪ್ರಾರಂಭವಾದ ವಿಶೇಷ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಯುವಕರು ಭಾಗವಹಿಸಿದ್ದಾರೆ. ಬಾರ್ಡರ್ ಬೆಟಾಲಿಯನ್ಗಾಗಿ ಎರಡನೇ ದಿನವಾದ ಇಂದು ಕೂಡ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಇದೇ ಮೊದಲ ಬಾರಿಗೆ ಗಡಿ ನಿರ್ದಿಷ್ಟವಾಗಿ ನೇಮಕಾತಿ ನಡೆಯುತ್ತಿದೆ. ಇದು ಉದ್ಯೋಗಾವಕಾಶ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶವನ್ನು ಕಾಶ್ಮೀರಿ ಯುವಕರಿಗೆ ನೀಡಿದೆ. ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗಾಗಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿದೆ” ಎಂದು ಬಾರ್ಡರ್ ಬೆಟಾಲಿಯನ್ಗಾಗಿನ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ನೇಮಕಾತಿ ಮಂಡಳಿಯ ಅಧ್ಯಕ್ಷ ಐಜಿಪಿ ಡಾ.ಎಸ್.ಡಿ.ಸಿಂಗ್ ಜಮ್ವಾಲ್ ಹೇಳಿದ್ದಾರೆ.
“ನೇಮಕಾತಿ ಬಹಳ ಉತ್ಸಾಹದಿಂದ ಕೂಡಿತ್ತು. ಈ ಹಿಂದೆ ನಾವು ಪೂಂಚ್ ಪ್ರದೇಶದಲ್ಲಿದ್ದೆವು. ಒಟ್ಟಾರೆ ನಮಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ” ಎಂದು ಅವರು ಹೇಳಿದ್ದಾರೆ.
ತಂತ್ರಜ್ಞಾನದ ಬಳಕೆಯಿಂದಾಗಿ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಸರ್ಕಾರದ ಉಪಕ್ರಮದಿಂದ ನಾವು ತುಂಬಾ ಸಂತಸಗೊಂಡಿದ್ದೇವೆ. ಗಡಿ ಪ್ರದೇಶಗಳಿಗೆ ಸೇರಿದ ಎಲ್ಲರಿಗೂ ಉದ್ಯೋಗಕ್ಕಾಗಿ ಉತ್ತಮ ಅವಕಾಶ ಸಿಗುತ್ತಿದೆ” ಎಂದು ರಾಜೌರಿಯ ನೇಮಕಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮೊಹಮ್ಮದ್ ಸರ್ಫ್ರಾಜ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರಿಗೆ ದೇಶದ ಸೇವೆ ಮಾಡಲು ಅವಕಾಶ ಸಿಗುವಂತೆ ಸರ್ಕಾರ ಇಂತಹ ಉಪಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.