ಅಗರ್ತಾಲ: ಬಿಜೆಪಿ ನೇತೃತ್ವದ ತ್ರಿಪುರಾ ಸರ್ಕಾರ ತನ್ನ ರಾಜ್ಯದ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಲು ಕಳೆದ 23 ತಿಂಗಳಲ್ಲಿ 21 ಹೊಸ ಯೋಜನೆಗಳನ್ನು ಪರಿಚಯಿಸಿದೆ ಮತ್ತು ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನೂ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹೇಳಿದ್ದಾರೆ.
“ದೇಶದ ಯಾವುದಾದರು ರಾಜ್ಯ ಸರ್ಕಾರವು ಇಷ್ಟು ದೊಡ್ಡ ಸಂಖ್ಯೆಯ 21 ಹೊಸ ಯೋಜನೆಗಳನ್ನು ಪರಿಚಯಿಸಿದೆ ಮತ್ತು ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಕೇವಲ 23 ತಿಂಗಳಲ್ಲಿ ಸರಣಿ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ನನಗನಿಸುತ್ತಿಲ್ಲ, ಆದರೆ ನಾವು ಈ ಕಾರ್ಯವನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಅಧಿಕಾರಿಗಳನ್ನುದ್ದೇಶಿಸಿ ಹೇಳಿದ್ದಾರೆ.
ಕಲ್ಯಾಣಪುರ ಹೈಯರ್ ಸೆಕೆಂಡರಿ ಶಾಲೆಯಲ್ಲಿ (ಪಶ್ಚಿಮ ತ್ರಿಪುರದ ಖೋವಾಯ್ ಜಿಲ್ಲೆಯಲ್ಲಿ) ಹೊಸದಾಗಿ ನಿರ್ಮಿಸಲಾದ ಕಟ್ಟಡವನ್ನು ಉದ್ಘಾಟಿಸಿದ ಮಾತನಾಡಿದ ಮುಖ್ಯಮಂತ್ರಿ, ಪ್ರಸ್ತುತ ಚಾಲ್ತಿಯಲ್ಲಿರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರವು ಎನ್ಸಿಇಆರ್ಟಿ ಪಠ್ಯಕ್ರಮವನ್ನು ಪರಿಚಯಿಸಿದೆ ಎಂದಿದ್ದಾರೆ.
“ಶಾಲಾ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸರ್ಕಾರದ ಧ್ಯೇಯದ ಭಾಗವಾಗಿ, ಕೇಂದ್ರೀಕೃತ ಪರೀಕ್ಷೆ, ಶಿಕ್ಷಕರ ತರಬೇತಿ, ಶಾಲೆಗಳಲ್ಲಿ ಬೋಧನೆಯ ನಿಕಟ ಮೇಲ್ವಿಚಾರಣೆ, ಶಿಕ್ಷಕರ ಕಾರ್ಯಕ್ಷಮತೆಯ ಮೌಲ್ಯಮಾಪನ ನಡೆಯುತ್ತಿದೆ. 50ಕ್ಕೂ ಹೆಚ್ಚು ಹೊಸ ಶಾಲೆಗಳನ್ನು ತೆರೆಯಲಾಗಿದೆ, 28 ಬಂಗಾಳಿ ಮಧ್ಯಮ ಶಾಲೆಗಳನ್ನು ಇಂಗ್ಲಿಷ್ ಮಧ್ಯಮ ಶಾಲೆಗಳಾಗಿ ಪರಿವರ್ತಿಸಲಾಗಿದೆ, ಶಾಲಾ ಗ್ರಂಥಾಲಯಗಳ ಆಧುನೀಕರಣ, ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದು ರಾಜ್ಯ ಸರ್ಕಾರ ಕೈಗೊಂಡ ಇತರ ಕ್ರಮಗಳು” ಎಂದು ದೇವ್ ಹೇಳಿದ್ದಾರೆ.
ಹಿಂದಿನ ಎಡಪಂಥೀಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಹಿಂದಿನ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಎಂದಿಗೂ ಯೋಚಿಸಲಿಲ್ಲ ಎಂದು ಆರೋಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.