ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಬೆಂಗಲವಾಲು ಪಡೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದ ಕರಾಳ ಘಟನೆಗೆ ಇಂದು ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ಗೌರವ ಸಲ್ಲಿಸಿದರು.
“ಪುಲ್ವಾಮಾ ದಾಳಿಯ ಹುತಾತ್ಮರಿಗೆ ನಾನು ಗೌರವ ಸಲ್ಲಿಸುತ್ತೇನೆ. ನಮ್ಮ ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ನಮ್ಮ ಸಾಹಸಿಗಳು ಮತ್ತು ಅವರ ಕುಟುಂಬಗಳಿಗೆ ಭಾರತ ಎಂದೆಂದಿಗೂ ಕೃತಜ್ಞವಾಗಿರುತ್ತದೆ” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
I pay homage to the martyrs of Pulwama attack.
India will forever be grateful of our bravehearts and their families who made supreme sacrifice for the sovereignty and integrity of our motherland.
— Amit Shah (@AmitShah) February 14, 2020
“2019ರ ಫೆ.14ಂದು ಪುಲ್ವಾಮಾದಲ್ಲಿ ನಡೆದ ಭೀಕರ ದಾಳಿಯ ಸಂದರ್ಭದಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಅವರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಇಡೀ ದೇಶ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನಿಂದ ನಿಂತಿದೆ ಮತ್ತು ಈ ಭೀತಿಯ ವಿರುದ್ಧ ಹೋರಾಟವನ್ನು ಮುಂದುವರಿಸಲು ಎಲ್ಲರೂ ಬದ್ಧರಾಗಿದ್ದಾರೆ” ಎಂದು ರಾಜನಾಥ್ ಟ್ವೀಟ್ ಮಾಡಿದ್ದಾರೆ.
Remembering the fallen @crpfindia personnel who were martyred during the dastardly attack in Pulwama(J&K) on this day in 2019.
India will never forget their sacrifice. Entire nation stands united against terrorism and we are committed to continue our fight against this menace.
— Rajnath Singh (@rajnathsingh) February 14, 2020
ಫೆಬ್ರವರಿ 14, 2019 ರಂದು ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ಸುಮಾರು 2,500 ಸಿಆರ್ಪಿಎಫ್ ಸಿಬ್ಬಂದಿಯಿದ್ದ 78 ಬೆಂಗಾವಲು ವಾಹನಗಳ ಮೇಲೆ ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿಯನ್ನು ನಡೆಸಿದ್ದರು. ಈ ದಾಳಿಯಲ್ಲಿ ಕನಿಷ್ಠ 40 ಸಿಆರ್ಪಿಎಫ್ ಯೋಧರು ಸಾವನ್ನಪ್ಪಿದ್ದರು.
ಜೈಶೇ-ಇ-ಮೊಹಮ್ಮದ್ ಎಂಬ ಪಾಕಿಸ್ಥಾನದ ಮೂಲದ ಭಯೋತ್ಪಾದನೆ ಸಂಘಟನೆ ಈ ದಾಳಿಯನ್ನು ನಡೆಸಿತ್ತು. ಈ ದಾಳಿಗೆ ಪ್ರತಿಕಾರವಾಗಿ 14 ದಿನಗಳ ಬಳಿಕ ಭಾರತ ಬಾಲಕೋಟ್ ವೈಮಾನಿಕ ದಾಳಿಯನ್ನು ನಡೆಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.