ನವದೆಹಲಿ: ಪುಲ್ವಾಮ ಭಯೋತ್ಪಾದನಾ ದಾಳಿ ನಡೆದು ಇಂದಿಗೆ ಒಂದು ವರ್ಷ. ತಾಯ್ನಾಡನ್ನು ರಕ್ಷಣೆ ಮಾಡುವ ಕರ್ತವ್ಯದ ಪಥದಲ್ಲಿ ವೀರ ಬಲಿದಾನವನ್ನು ಮಾಡಿದ ಯೋಧರನ್ನು ಸ್ಮರಿಸಿ ಭಾರತವಿಂದು ಅಶ್ರುತರ್ಪಣ ಮಾಡುತ್ತಿದೆ. ಫೆ.14 ಅನ್ನು ಕರಾಳ ದಿನವಾಗಿ ಜನ ಆಚರಿಸುತ್ತಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಯೋಧರ ತ್ಯಾಗ ಮತ್ತ ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.
Tributes to the brave martyrs who lost their lives in the gruesome Pulwama attack last year. They were exceptional individuals who devoted their lives to serving and protecting our nation. India will never forget their martyrdom.
— Narendra Modi (@narendramodi) February 14, 2020
2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.