ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಸುಪ್ರೀಂಕೋರ್ಟ್ ಮಾಜಿ ವಕೀಲೆ, 7 ಬಾರಿ ಸಂಸದೆ, 3 ಬಾರಿ ಶಾಸಕಿ, ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿ ದಿವಂಗತ ಸುಷ್ಮಾ ಸ್ವರಾಜ್ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ.
ಸುಷ್ಮಾ ಸ್ವರಾಜ್ ಅವರು 1952ರ ಫೆಬ್ರುವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ ಇವರು ಜನಿಸಿದರು. 1973ರಲ್ಲಿ ಇವರು ಸುಪ್ರೀಂ ಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿದರು. ಸುಷ್ಮಾ ಸ್ವರಾಜ್ ಅವರು ರಾಜಕೀಯ ವೃತ್ತಿಜೀವನವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ 1970ರಲ್ಲಿ ಆರಂಭಿಸಿದರು.
1977 ರಿಂದ 1982ರವರೆಗೆ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು. 1977 ರ ಜುಲೈನಲ್ಲಿ ಆಗಿನ ಮುಖ್ಯಮಂತ್ರಿ ದೇವಿ ಲಾಲ್ ಅವರ ನೇತೃತ್ವದಲ್ಲಿ ಜನತಾ ಪಕ್ಷದ ಸರಕಾರದಲ್ಲಿ ಸಂಪುಟ ಸಚಿವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು. ಅವರು 1979ರಲ್ಲಿ ಹರಿಯಾಣ ರಾಜ್ಯದ ಜನತಾ ಪಕ್ಷದ ರಾಜ್ಯ ಅಧ್ಯಕ್ಷರಾದರು. ಅವರು 1987 ರಿಂದ 1990ರ ಅವಧಿಯಲ್ಲಿ ಬಿಜೆಪಿ-ಲೋಕಸಭೆ ಮೈತ್ರಿ ಸರಕಾರದಲ್ಲಿ ಹರಿಯಾಣದ ಶಿಕ್ಷಣ ಸಚಿವೆಯಾಗಿದ್ದರು. ಬಳಿಕ ಅವರು ದೆಹಲಿಯ ಮುಖ್ಯಮಂತ್ರಿಯಾಗಿ, ವಾಜಪೇಯಿ ಸರ್ಕಾರದಲ್ಲಿ ಸಚಿವೆಯಾಗಿ ಸೇವೆ ಸಲ್ಲಿಸಿದ್ದಾರೆ.
2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ವಿದೇಶಾಂಗ ಸಚಿವೆಯಾಗಿ ನಿಯುಕ್ತಿಗೊಂಡರು. ಈ ಸಂದರ್ಭದಲ್ಲಿ ಅವರು ಮಾಡಿದ ಸೇವೆಗಳು ಜನ ಮನ್ನಣೆಗೆ ಪಾತ್ರವಾಗಿತ್ತು. ಸಂಕಷ್ಟದಲ್ಲಿದ್ದ ಅನಿವಾಸಿ ಭಾರತೀಯರಿಗೆ ಅವರು ಮಾಡಿದ ಸೇವೆ ಸದಾ ಸ್ಮರಣೀಯ. ಭಾರತದ ರಾಜತಾಂತ್ರಿಕ ಸಂಬಂಧಗಳನ್ನು ವೃದ್ಧಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.
ಅಗಸ್ಟ್ 6, 2019 ರಂದು ಅವರು ಹೃದಯಾಘಾತದಿಂದ ಮರಣವನ್ನು ಹೊಂದಿದರು.
ಸುಷ್ಮಾ ಸ್ವರಾಜ್ ಅವರ ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೊದಿ ಅವರ ಕೊಡುಗೆಗಳನ್ನು ಸ್ಮರಿಸಿದ್ದಾರೆ. “ಸುಷ್ಮಾ ಅವರ ಸ್ಮರಣೆಗಳು. ಅವರು ಘನತೆ, ಸಭ್ಯತೆ ಮತ್ತು ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯನ್ನು ತೋರಿಸಿದವರು. ಭಾರತೀಯ ಮೌಲ್ಯಗಳು ಮತ್ತು ನೀತಿಗಳಲ್ಲಿ ದೃಢವಾಗಿ ಬೇರೂರಿದ್ದ ಆಕೆ ನಮ್ಮ ರಾಷ್ಟ್ರದ ಬಗ್ಗೆ ದೊಡ್ಡ ಕನಸುಗಳನ್ನು ಕಂಡಿದ್ದರು. ಅವರು ಅಸಾಧಾರಣ ಸಹೋದ್ಯೋಗಿ ಮತ್ತು ಅತ್ಯುತ್ತಮ ಮಂತ್ರಿಯಾಗಿದ್ದರು” ಎಂದಿದ್ದಾರೆ.
Remembering Sushma Ji.
She epitomised dignity, decency and unwavering commitment to public service. Firmly rooted in Indian values and ethos, she had great dreams for our nation. She was an exceptional colleague and an outstanding Minister. pic.twitter.com/IeEJlNRAQB
— Narendra Modi (@narendramodi) February 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.