ಚೆನ್ನೈ: ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರು ನೆಲ್ಲೂರಿನಲ್ಲಿರುವ ತಮ್ಮ ಪೂರ್ವಜರ ಮನೆಯನ್ನು ಕಂಚಿ ಮಠಕ್ಕೆ ದಾನ ಮಾಡಿದ್ದಾರೆ.
ಖ್ಯಾತ ಬರಹಗಾರ ಎಸ್. ಗುರುಮೂರ್ತಿ ಅವರು ಟ್ವೀಟ್ನಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಮಣ್ಯಂ ನೆಲ್ಲೂರಿನಲ್ಲಿರುವ ತನ್ನ ಪೂರ್ವಜರ ಮನೆಯನ್ನು ಕಂಚಿ ಮಠಕ್ಕೆ ದಾನ ಮಾಡಿದ್ದಾರೆ. ಅವರು ದಾನ ಮಾಡಿದ ನೆಲ್ಲೂರಿನ ತಮ್ಮ ಮನೆಯಲ್ಲಿ ಕಂಚಿ ಆಚಾರ್ಯ ಶ್ರೀ ವಿಜಯೇಂದ್ರ ಸರಸ್ವತಿ ಅವರ ಸಮ್ಮುಖದಲ್ಲಿ ಹಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಜೊತೆಗೆ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಸುಬ್ರಹ್ಮಣ್ಯಂ ಅವರು ತಮ್ಮ ನೆಲ್ಲೂರು ಮನೆಯಲ್ಲಿ ಕಂಚಿ ಆಚಾರ್ಯ ಶ್ರೀ ವಿಜಯೇಂದ್ರ ಸರಸ್ವತಿ ಅವರ ಮುಂದೆ ಹಾಡುತ್ತಿರುವ ದೃಶ್ಯವಿದೆ.
ವರದಿಗಳ ಪ್ರಕಾರ, ಬಾಲಸುಬ್ರಹ್ಮಣ್ಯಂ ಅವರು ಸಂಸ್ಕೃತ ಮತ್ತು ವೇದ ಪಾಠಶಾಲೆಯನ್ನು ಸ್ಥಾಪಿಸಲು ಮಠಕ್ಕೆ ತಮ್ಮ ಮನೆಯನ್ನು ದಾನ ಮಾಡಿದ್ದಾರೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಹಾಡು ಹಾಡಿದ್ದಾರೆ. 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಹಾಡಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದ ಕೀರ್ತಿಯೂ ಇವರದ್ದು. ಎಸ್ಪಿಬಿ ಎಂದೇ ಖ್ಯಾತಿ ಪಡೆದಿರುವ ಇವರು ಕಲಾ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಭಾರತ ಸರ್ಕಾರ ಇವರಿಗೆ ಪದ್ಮಶ್ರೀ ಮತ್ತು ಪದ್ಮಭೂಷಣ ನೀಡಿ ಗೌರವಿಸಿದೆ.
#SPBalasibramanyam set a new trend by donating to Dharmic Mutt instead of donating to govt occupied temples. We all know how govts use that money.
Hopefully SPB’s example will catch up with other celebs and inspire them to donate for Dharma.https://t.co/KN4auHrFZU
— Truth Speaks सत्यमेव जयते దాగదు నిజం (@TruthSpeaksSo) February 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.