ನವದೆಹಲಿ: ಕೊರೋನಾ ವೈರಸ್ ಪೀಡಿತ ಚೀನಾದ ವುಹಾನ್ ನಗರದಿಂದ ಸ್ಥಳಾಂತರಿಸಲ್ಪಟ್ಟ ಎಲ್ಲಾ 645 ಭಾರತೀಯರು Covid-2019 ಪರೀಕ್ಷೆಯಲ್ಲಿ ನಕಾರಾತ್ಮಕ ಎಂದು ಸಾಬೀತಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕೊರೋನವೈರಸ್ ಪರೀಕ್ಷೆಯಲ್ಲಿ ಧನಾತ್ಮಕ ಎಂದು ಸಾಬೀತಾದ ಮತ್ತು ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಒಬ್ಬರು ಚೇತರಿಸಿಕೊಂಡಿದ್ದಾರೆ, ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಇತರ ಇಬ್ಬರು ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ, ಶೀಘ್ರದಲ್ಲೇ ಅವರನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಏಜೆನ್ಸಿಗಳು ಎಲ್ಲಾ ಪ್ರಕರಣಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ವ್ಯಕ್ತಿಗಳ ಸಂಪರ್ಕ ಇತಿಹಾಸವನ್ನು ಪತ್ತೆ ಹಚ್ಚಿದೆ. ಪಿಎಂಒ ಮತ್ತು ಇತರ ಸಂಬಂಧಪಟ್ಟ ಸಚಿವಾಲಯಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಮಾರ್ಗಸೂಚಿಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ ಪಕ್ಷದಲ್ಲಿ ಸರ್ಕಾರವು ಎಲ್ಲಾ ವೈದ್ಯಕೀಯ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದೆ ಎಂದಿದ್ದಾರೆ.
Covid -2019 ಅನ್ನು ನಿಭಾಯಿಸಲು ಭಾರತವು ವೈದ್ಯಕೀಯ ಸಲಕರಣೆಗಳಂತಹ ಅಗತ್ಯ ವಸ್ತುಗಳನ್ನು ಚೀನಾಕ್ಕೆ ಕಳುಹಿಸುತ್ತಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದರು. Covid -2019 ಅನ್ನು ಪರೀಕ್ಷಿಸುವಲ್ಲಿ ಮಾಲ್ಡೀವ್ಸ್ ಮತ್ತು ಭೂತಾನ್ ದೇಶಕ್ಕೂ ಭಾರತ ಬೆಂಬಲ ನೀಡಿದೆ ಎಂದು ಅವರು ಹೇಳಿದರು. ಅಫ್ಘಾನಿಸ್ಥಾನಕ್ಕೂ ಬೆಂಬಲ ನೀಡಲು ಸರ್ಕಾರ ಒಪ್ಪಿದೆ ಎಂದಿದ್ದಾರೆ.
ಗಡಿ ಪ್ರದೇಶಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಪರಿಸ್ಥಿತಿಯನ್ನು ಎದುರಿಸಲು ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಸೌಲಭ್ಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಹೇಳಿದ್ದಾರೆ. ಬ್ಯಾಂಕಾಕ್, ಸಿಂಗಾಪುರ ಮತ್ತು ಹಾಂಕಾಂಗ್ ದೇಶಗಳಿಂದ ಬರುವ ವಿಮಾನಗಳನ್ನು ಕಟ್ಟುನಿಟ್ಟಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.