ವಾರಣಾಸಿ: ಮೂರು ‘ಜ್ಯೋತಿರ್ಲಿಂಗ’ ಕ್ಷೇತ್ರಗಳನ್ನು ಸಂಪರ್ಕಿಸುವ ಕಾಶಿ ಮಹಾಕಾಲ್ ಎಕ್ಸ್ಪ್ರೆಸ್ಗೆ ಚಾಲನೆಯನ್ನು ನೀಡುವ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಶುಕ್ರವಾರ ತಿಳಿಸಿದೆ.
ಅವರ ಒಂದು ದಿನದ ಭೇಟಿಗಾಗಿ ವಾರಣಾಸಿಗೆ ಆಗಮಿಸಲಿರುವ ಪ್ರಧಾನಿ, ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೋರೇಷನ್ (ಆರ್ಸಿಟಿಸಿ)ನ ಕಾಶಿ ಮಹಾಕಾಲ್ ಎಕ್ಸ್ಪ್ರೆಸ್ಗೆ ವಿಡಿಯೋ ಲಿಂಕ್ ಮೂಲಕ ಚಾಲನೆ ನೀಡಿದ್ದಾರೆ. ಈ ರೈಲು ಮೂರು ‘ಜ್ಯೋತಿರ್ಲಿಂಗ’ ಕ್ಷೇತ್ರಗಳಾದ ವಾರಣಾಸಿ, ಉಜ್ಜಯಿನಿ ಮತ್ತು ಓಂಕಾರೇಶ್ವರವನ್ನು ಸಂಪರ್ಕಿಸುತ್ತದೆ.
ಮೋದಿ ಅವರು ವಾರಣಾಸಿಗೆ ಭೇಟಿ ನೀಡುವ ವೇಳೆ ಜಗದ್ಗುರು ವಿಶ್ವರಾಧ್ಯ ಗುರುಕುಲದ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸಿದ್ಧಾಂತ್ ಶಿಖಮಣಿ ಗ್ರಂಥದ 19 ಭಾಷೆಗಳಲ್ಲಿ ಅನುವಾದಿತ ಆವೃತ್ತಿಯನ್ನು ಮತ್ತು ಅದರ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮಾರಕ ಕೇಂದ್ರವನ್ನೂ ಮೋದಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಕಳೆದ ವರ್ಷದಲ್ಲಿ ಸುಮಾರು 30 ಒರಿಸ್ಸಾ ಕುಶಲಕರ್ಮಿಗಳು ಮತ್ತು ಕಲಾವಿದರು ಈ ಯೋಜನೆಯಲ್ಲಿ ಕೆಲಸ ಮಾಡಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಉಪಾಧ್ಯಾಯ ಅವರ 63 ಅಡಿ ಎತ್ತರದ ಪಂಚ ಲೋಹದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಪ್ರತಿಮೆಯನ್ನು ಪೂರ್ಣಗೊಳಿಸಲು 200 ಕ್ಕೂ ಹೆಚ್ಚು ಕುಶಲಕರ್ಮಿಗಳು ಕಳೆದ ಒಂದು ವರ್ಷದಿಂದ ಕೆಲಸ ಮಾಡಿದ್ದಾರೆ.
ಕಾಶಿ ಹಿಂದೂ ವಿಶ್ವವಿದ್ಯಾಲಯದ (ಬಿಎಚ್ಯು) 430 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಮತ್ತು ಬಿಎಚ್ಯುನಲ್ಲಿ 74 ಹಾಸಿಗೆಗಳ ಮನೋವೈದ್ಯಕೀಯ ಆಸ್ಪತ್ರೆ ಸೇರಿದಂತೆ 30 ಯೋಜನೆಗಳನ್ನು ಮೋದಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಪಂಡಿತ್ ದೀನಯಾಳ್ ಉಪಾಧ್ಯಾಯ ಹಸ್ತಕಲಾ ಸಂಕುಲ್ನಲ್ಲಿ ಎರಡು ದಿನಗಳ ಕಾರ್ಯಕ್ರಮ ‘ಕಾಶಿ ಏಕ್ ರೂಪ್ ಅನೇಕ್’ ಅನ್ನು ಮೋದಿ ಉದ್ಘಾಟಿಸಲಿದ್ದಾರೆ. ಇದು ಉತ್ತರ ಪ್ರದೇಶದ ಎಲ್ಲೆಡೆಯಿಂದ ಬಂದ ಉತ್ಪನ್ನಗಳನ್ನು ಪ್ರದರ್ಶಿಸಲಿದೆ. ವಿಶ್ವದ ವಿವಿಧ ದೇಶಗಳಿಂದ ಬರುವ ಖರೀದಿದಾರರು ಮತ್ತು ಕುಶಲಕರ್ಮಿಗಳೊಂದಿಗೆ ಪ್ರಧಾನಿ ಸಂವಹನ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.