ನವದೆಹಲಿ: ಬಿಜೆಪಿಯ ರಾಜ್ಯ ಘಟಕಗಳಲ್ಲಿ ಹೆಚ್ಚಿನ ಸಂಘಟನಾತ್ಮಕ ಬದಲಾವಣೆಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಮೂರು ರಾಜ್ಯಗಳಲ್ಲಿ ಪಕ್ಷದ ಅಧ್ಯಕ್ಷರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಕೆ. ಸುರೇಂದ್ರನ್ ಅವರನ್ನು ಕೇರಳ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ, ವಿಷ್ಣು ದತ್ ಶರ್ಮಾ ಅವರನ್ನು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ಮತ್ತು ದಲ್ ಬಹದ್ದೂರ್ ಚೌಹಾನ್ ಅವರನ್ನು ಸಿಕ್ಕಿಂ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ರಾಜ್ಯ ಘಟಕಗಳಲ್ಲಿ ಸಂಘಟನೆಗೆ ಹೆಚ್ಚಿನ ಬಲ ನೀಡುವ ಸಲುವಾಗಿ ಈ ಮಹತ್ತರ ನೇಮಕಗಳನ್ನು ಮಾಡಿದ್ದಾರೆ.
ಕೆ. ಸುರೇಂದ್ರನ್ ಅವರು ಕೇರಳದಲ್ಲಿ ಬಿಜೆಪಿಯ ಜನಪ್ರಿಯ ಮುಖಂಡನಾಗಿದ್ದಾರೆ. 2016 ರ ವಿಧಾನಸಭಾ ಚುನಾವಣೆಯಲ್ಲಿ ಇವರು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ವಿರುದ್ಧ ಮಂಜೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕೇವಲ 89 ಮತಗಳಿಂದ ಸೋಲುಂಡಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲೂ ಇವರು ಸ್ಪರ್ಧಿಸಿದ್ದರು.
“ಪಕ್ಷವನ್ನು ಎಲ್ಲಾ ಹಂತದಲ್ಲೂ ಬಲಪಡಿಸುವ ಮೂಲಕ ಪಕ್ಷದ ನಾಯಕತ್ವವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಮತ್ತು ನ್ಯಾಯ ನೀಡುತ್ತೇನೆ” ಎಂದು ಕೆ ಸುರೇಂದ್ರನ್ ಹೇಳಿದ್ದಾರೆ. ಕಳೆದ ವರ್ಷ ಮಿಜೋರಾಂ ರಾಜ್ಯಪಾಲರಾಗಿ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ನೇಮಕಗೊಂಡ ಹಿನ್ನಲೆಯಲ್ಲಿ ಕೇರಳದಲ್ಲಿ ಬಿಜೆಪಿ ಅಧ್ಯಕ್ಷ ಹುದ್ದೆ ಖಾಲಿ ಇತ್ತು.
ವಿಷ್ಣು ದತ್ತ ಶರ್ಮಾ ಅವರು, ಖಜುರಾಹೊದ ಸಂಸತ್ ಸದಸ್ಯರಾಗಿರುವ ವಿಷ್ಣು ದತ್ ಶರ್ಮಾ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸುದೀರ್ಘ ಒಡನಾಟವನ್ನು ಹೊಂದಿದ್ದಾರೆ ಮತ್ತು ಅಖಿಲ ಭಾರತೀಯ ವಿದ್ಯಾಾರ್ಥ ಪರಿಷತ್ (ಎಬಿವಿಪಿ) ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಅವರು ಸುಮಾರು 32 ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿದ್ದಾರೆ ಮತ್ತು ಮೂಲತಃ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.