ಚಂಡೀಗಢ: ಕ್ರೀಡೆಯನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುವನ್ನು ಪ್ರೋತ್ಸಾಹಿಸಲು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ರಾಜ್ಯದ ಕ್ರೀಡಾಪಟುಗಳಿಗೆ ನಗದು ಬಹುಮಾನ ಮತ್ತು ಉದ್ಯೋಗಾವಕಾಶಗಳನ್ನು ಘೋಷಿಸಿದ್ದಾರೆ.
ರಾಜ್ಯ ಕ್ರೀಡಾ ನೀತಿಯ ನಿಬಂಧನೆಗಳನ್ನು ಪ್ರಕಟಿಸಿದ ಸಿಎಂ ಖಟ್ಟರ್, ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ 6 ಕೋಟಿ ರೂಪಾಯಿ, ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ 3 ಕೋಟಿ ರೂಪಾಯಿ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳನ್ನು ಗೆಲ್ಲುವ ಕ್ರೀಡಾಪಟುಗಳಿಗೆ 1.5 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಟಗಾರನು ಪದಕ ಗೆಲ್ಲುತ್ತಾನೋ ಇಲ್ಲವೋ ಎಂಬುದರ ಹೊರತಾಗಿಯೂ, ರಾಜ್ಯ ಮತ್ತು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ ಕಾರಣಕ್ಕಾಗಿ ಅವರಿಗೆ ತಲಾ 15 ಲಕ್ಷ ರೂಪಾಯಿಗಳನ್ನು ರಾಜ್ಯ ಸರ್ಕಾರವು ನೀಡಲಿದೆ ಎಂದು ಸಿಎಂ ಖಟ್ಟರ್ ಘೋಷಿಸಿದ್ದಾರೆ.
ರೋಹ್ಟಕ್ ನಗರದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ (ಎಂಡಿಯು) ಆಯೋಜಿಸಲಾಗಿದ್ದ 46 ನೇ ಕಿರಿಯ ರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯ ಸಮಾರೋಪ ಸಂದರ್ಭದಲ್ಲಿ ಕ್ರೀಡಾಪಟುಗಳು ಸೇರಿದಂತೆ ಸಭೆಯನ್ನುದ್ದೇಶಿಸಿ ಸಿಎಂ ಖಟ್ಟರ್ ಈ ಘೋಷಣೆಗಳನ್ನು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.