ನವದೆಹಲಿ: ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ನಡೆಯುತ್ತಿರುವ ವನ್ಯ ಜೀವಿಗಳ ವಲಸೆ ಪ್ರಭೇದಗಳ ಸಂರಕ್ಷಣೆ ಕುರಿತ 13 ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್ (ಸಿಒಪಿ) ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ವಲಸೆ ಪ್ರಭೇದಗಳ ಸಂರಕ್ಷಣೆಗಾಗಿ ಭಾರತದ ಬದ್ಧತೆಯನ್ನು ದೃಢಪಡಿಸಿದರು. ಸಂರಕ್ಷಣೆ, ಸುಸ್ಥಿರ ಜೀವನಶೈಲಿ ಮತ್ತು ಹಸಿರು ಅಭಿವೃದ್ಧಿ ಮಾದರಿಯ ಮೌಲ್ಯಗಳ ಆಧಾರದ ಮೇಲೆ ಭಾರತವು ಹವಾಮಾನ ಕ್ರಿಯೆಯನ್ನು ಮುನ್ನಡೆಸುತ್ತಿದೆ ಎಂದರು. ವನ್ಯಜೀವಿಗಳು ಮತ್ತು ಆವಾಸಸ್ಥಾನಗಳ ಸಂರಕ್ಷಣೆ ಭಾರತದ ಸಾಂಸ್ಕೃತಿಕ ನೀತಿಯ ಒಂದು ಭಾಗವಾಗಿದೆ, ಇದು ಸಹಾನುಭೂತಿ ಮತ್ತು ಸಹಬಾಳ್ವೆಯನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.
ವನ್ಯಜೀವಿಗಳ ಸಂರಕ್ಷಣೆ ಮತ್ತು ದೇಶದಲ್ಲಿ ಅರಣ್ಯ ವ್ಯಾಪ್ತಿ ಹೆಚ್ಚಳಕ್ಕಾಗಿ ಪ್ರಧಾನಿ ತಮ್ಮ ಸರ್ಕಾರ ಕೈಗೊಂಡ ವಿವಿಧ ಉಪಕ್ರಮಗಳನ್ನು ಒತ್ತಿ ಹೇಳಿದರು.
ಸಂರಕ್ಷಣಾ ಕ್ಷೇತ್ರದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿ, ”ಆಸಿಯಾನ್ ಮತ್ತು ಪೂರ್ವ ಏಷ್ಯಾ ಸಮಿತ್ ರಾಷ್ಟ್ರಗಳೊಂದಿಗಿನ ತನ್ನ ಒಡನಾಟವನ್ನು ಬಲಪಡಿಸಲು ಭಾರತ ಪ್ರಸ್ತಾಪಿಸಿದೆ. ಇದು ಇಂಡೋ ಪೆಸಿಫಿಕ್ ಮಹಾಸಾಗರ ಉಪಕ್ರಮದೊಂದಿಗೆ ಸಂಯೋಜಿತ ಆಗಲಿದ್ದು, ಇದರಲ್ಲಿ ಭಾರತ ನಾಯಕತ್ವ ವಹಿಸಲಿದೆ” ಎಂದರು.
130 ದೇಶಗಳ ಪ್ರತಿನಿಧಿಗಳು, ಪ್ರಖ್ಯಾತ ಪರಿಸರವಾದಿಗಳು ಮತ್ತು ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರರಾಷ್ಟ್ರೀಯ ಎನ್ಜಿಒಗಳು ಈ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ. ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ವನ್ಯಜೀವಿ ಸಂರಕ್ಷಣೆಯ ಉತ್ತಮ ಅಭ್ಯಾಸಗಳನ್ನು ಪ್ರದರ್ಶಿಸಲಿದ್ದು, ಇದು ಫೆ.22 ರವರೆಗೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.