ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನ ಇಂದು ಆರಂಭಗೊಂಡಿದೆ. ಬಿಜೆಪಿಯು ಉಪ ಚುನಾವಣೆಯಲ್ಲಿ ಸ್ಪಷ್ಟ ಬಹುಮತವನ್ನು ಪಡೆದು ಸರ್ಕಾರವನ್ನು ಸ್ಥಿರಗೊಳಿಸಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.ರಾಜ್ಯಪಾಲ ವಜೂಭಾಯಿ ವಾಲಾ ಅವರು ಇಂದು ಭಾಷಣ ಮಾಡಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳು, ಕಾಮಗಾರಿಗಳು, ಜನಪ್ರಿಯ ಕಾರ್ಯಕ್ರಮಗಳ ಬಗೆಗೆ ಹಿಂದಿಯಲ್ಲಿ ರಾಜ್ಯಪಾಲರು ಭಾಷಣವನ್ನು ಮಂಡಿಸಿದರು.
ಐಟಿ ಬಿಟಿ ನಗರ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು 8 ಸೈಬರ್ ಅಪರಾಧ ನಿಗ್ರಹಿಸುವ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದ್ದು, ಭಯೋತ್ಪಾದನಾ ವಿರೋಧಿ ಘಟಕ ಅಸ್ಥಿತ್ವಕ್ಕೆ ಬರುತ್ತಿದೆ, ಪೋಲಿಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಅಡಿ 41 ಲಕ್ಷ ರೈತರ ಖಾತೆಗೆ 8.25 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದೆ, ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿ ಈವರೆಗೆ ನೆರೆ ಪರಿಹಾರಕ್ಕಾಗಿ 827 ಕೋಟಿ ರೂಪಾಯಿ ವ್ಯಯಿಸಿದೆ ಎಂದರು.
ಕೈಗಾರಿಕಾ ಕ್ಷೇತ್ರದ ಅಭ್ಯುದಯಕ್ಕಾಗಿ ರಾಜ್ಯ ಸರ್ಕಾರ 4,೦050 ಕೋಟಿ ವೆಚ್ಚದ 21 ಯೋಜನೆಗಳಿಗೆ ಅನುಮೋದನೆ ಕೊಟ್ಟಿದೆ, ಆಯುಷ್ಮಾನ್ ಯೋಜನೆ ಅಡಿ 3.3 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ಒದಗಿಸಲಾಗಿದೆ. ಅಪೌಷ್ಟಿಕತೆ ಮಕ್ಕಳ ಚಿಕಿತ್ಸೆಗಾಗಿ 49 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಫೆ.17ರಿಂದ ಆರಂಭವಾಗಿರುವ ಅಧಿವೇಶನ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.