ನವದೆಹಲಿ: ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಸೋಮವಾರ ಹೊಸ ಡೆತ್ ವಾರಂಟ್ ಹೊರಡಿಸಿದೆ. ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಪವನ್ ಗುಪ್ತಾ, ಮತ್ತು ಮುಖೇಶ್ ಸಿಂಗ್ ಅವರನ್ನು ಗಲ್ಲಿಗೇರಿಸಲು ಪಟಿಯಾಲ ನ್ಯಾಯಾಲಯ ಮಾರ್ಚ್ 3 ರಂದು ಬೆಳಿಗ್ಗೆ 6 ಗಂಟೆಗೆ ಸಮಯವನ್ನು ನಿಗದಿಪಡಿಸಿದೆ.
2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧ ಹೊಸ ಡೆತ್ ವಾರಂಟ್ ಹೊರಡಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯವು ಆಲಿಸಿದೆ. ತಿಹಾರ್ ಜೈಲಿನ ಕಾನೂನು ಅಧಿಕಾರಿಯು ನ್ಯಾಯಾಲಯಕ್ಕೆ ಸ್ಥಿತಿ ವರದಿಯನ್ನು ಹಸ್ತಾಂತರಿಸಿದ್ದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀವ್ ಮೋಹನ್ ಅವರು ಪ್ರಕರಣದ ಪ್ರಸ್ತುತ ಸ್ಥಿತಿಯ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದರು ಮತ್ತು ನಾಲ್ವರು ಆರೋಪಿಗಳಲ್ಲಿ ಮೂವರು ಈಗಾಗಲೇ ತಮ್ಮ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ನ್ಯಾಯಾಲಯದಲ್ಲಿ ಇನ್ನು ಯಾವುದೇ ಅರ್ಜಿ ಬಾಕಿ ಉಳಿದಿಲ್ಲ ಎಂದು ಮೋಹನ್ ಹೇಳಿದ್ದಾರೆ. ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಏಳು ದಿನಗಳ ಕಾಲಾವಕಾಶ ನೀಡಿತ್ತು ಮತ್ತು ಆ ಅವಧಿ ಈಗ ಮುಗಿದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಫೆಬ್ರವರಿ 14 ರಂದು ಶರ್ಮಾ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಪರಾಧಿಗಳಾದ ಅಕ್ಷಯ್ ಠಾಕೂರ್ ಮತ್ತು ಮುಖೇಶ್ ಸಿಂಗ್ ಅವರ ಕ್ಷಮಾಧಾನ ಅರ್ಜಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದರು. ಫೆಬ್ರವರಿ 5 ರಂದು ದೆಹಲಿ ಹೈಕೋರ್ಟ್ ನಾಲ್ಕು ಆರೋಪಿಗಳಿಗೆ ಲಭ್ಯವಿರುವ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪಡೆಯಲು ಒಂದು ವಾರದ ಸಮಯವನ್ನು ನೀಡಿತು ಮತ್ತು ಅಪರಾಧಿಗಳನ್ನು ಒಂದೇ ಅಪರಾಧಕ್ಕೆ ಶಿಕ್ಷೆಗೊಳಗಾದ ಕಾರಣ ಅವರನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲಾಗುವುದಿಲ್ಲ ಎಂದು ಹೇಳಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.