ನವದೆಹಲಿ: ಭಾರತದ ಅಂತರ್ಜಲ ಅಗತ್ಯತೆಗಳನ್ನು ಸುಧಾರಿಸಲು ವಿಶ್ವಬ್ಯಾಂಕ್ ಮತ್ತು ಭಾರತ ಸರ್ಕಾರ 450 ಮಿಲಿಯನ್ ಯುಎಸ್ಡಿ ಸಾಲ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಮುಖ ಉದ್ದೇಶವೆಂದರೆ ಅಂತರ್ಜಲದ ಕುಸಿತದ ಮಟ್ಟವನ್ನು ನಿಗ್ರಹಿಸುವುದು ಮತ್ತು ಭಾರತದಲ್ಲಿ ಅಂತರ್ಜಲ ಸುಧಾರಣೆಯ ಪ್ರಯತ್ನಗಳನ್ನು ಬಲಪಡಿಸುವುದು.
ಕುಸಿಯುತ್ತಿರುವ ಅಂತರ್ಜಲದ ಮಟ್ಟವನ್ನು ಮತ್ತು ಅಂತರ್ಜಲ ಸಂಸ್ಥೆಗಳನ್ನು ಬಲಪಡಿಸುವ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಬೆಂಬಲ ನೀಡುವ ಸಲುವಾಗಿ ಈ ಒಪ್ಪಂದ ಏರ್ಪಟ್ಟಿದೆ.
ಜಲಚರಗಳ ವೃದ್ಧಿಸುವಿಕೆ, ನೀರಿನ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳನ್ನು ಈ ಕಾರ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುತ್ತದೆ. ನೀರಿನ ಕೊಯ್ಲು, ನೀರಿನ ನಿರ್ವಹಣೆ ಮತ್ತು ಬೆಳೆ ಅನುಸರಣೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಇದು ಉತ್ತೇಜಿಸುತ್ತದೆ, ಸುಸ್ಥಿರ ಅಂತರ್ಜಲ ನಿರ್ವಹಣೆಗೆ ಸಾಂಸ್ಥಿಕ ರಚನೆಯನ್ನು ರಚಿಸುತ್ತದೆ ಮತ್ತು ನಿರಂತರ ಅಂತರ್ಜಲ ನಿರ್ವಹಣೆಯಲ್ಲಿ ತೊಡಗಿಕೊಂಡ ಸಮುದಾಯಗಳು ಮತ್ತು ಸಂಬಂಧಿತ ಜನರನ್ನು ಸಕ್ರಿಯಗೊಳಿಸಲಾಗುತ್ತದೆ.
ಅಂತರ್ಜಲ ನಿರ್ವಹಣೆಗೆ ಸಂಬಂಧಿಸಿದ ಸಾಂಸ್ಥಿಕ ಚೌಕಟ್ಟನ್ನು ಬಲಪಡಿಸುವ ಉದ್ದೇಶದಿಂದ ಅಟಲ್ ಭುಜಲ್ ಯೋಜನೆ (ಎಬಿಎಚ್ವೈ) ಯನ್ನು ಜಾರಿಗೊಳಿಸಲಾಗಿದೆ. ಸುಸ್ಥಿರ ಅಂತರ್ಜಲ ಸಂಪನ್ಮೂಲ ನಿರ್ವಹಣೆಗಾಗಿ ಸಮುದಾಯ ಮಟ್ಟದಲ್ಲಿ ಜನರ ನಡವಳಿಕೆಯಲ್ಲಿ ಬದಲಾವಣೆಗಳನ್ನು ಉತ್ತೇಜಿಸುವ ಗುರಿಯನ್ನು ಇದು ಹೊಂದಿದೆ.
ಈ ಒಪ್ಪಂದವು ಕೃತಕ ಬುದ್ಧಿಮತ್ತೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂತರ್ಜಲ ಸುಧಾರಣಾ ಕಾರ್ಯಕ್ರಮದ ಉತ್ತಮ ಅನುಷ್ಠಾನಕ್ಕೆ ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಗ್ರಾಮೀಣ ಜನರಿಗೆ ಸಹಾಯ ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.