ಲಕ್ನೋ: ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು, ಭದ್ರತಾ ವ್ಯವಸ್ಥೆಗಳನ್ನು ಮಾಡುವಲ್ಲಿ ರಾಜ್ಯವು ಮಾಡಿದ ವೆಚ್ಚವನ್ನು ಮರಳಿ ಪಡೆಯಲು 1 ಕೋಟಿ ರೂ.ಗಳನ್ನು ನೀಡುವಂತೆ ಆದೇಶಿಸಿದೆ.
ವರದಿಯ ಪ್ರಕಾರ, ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್ಘರಿ ಅವರು ಕೂಡ ಸರ್ಕಾರದಿಂದ ಈ ದಂಡ ವಿಧಿಸಲ್ಪಟ್ಟವರಲ್ಲಿ ಒಬ್ಬರು. ಮೊರಾದಾಬಾದ್ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಈ ದಂಡವನ್ನು ವಿಧಿಸಲಾಗಿದೆ. ಈ ಕಾಂಗ್ರೆಸ್ ಮುಖಂಡ ಸಿಎಎ ವಿರೋಧಿ ಪ್ರತಿಭಟನಾಕಾರರಲ್ಲಿ ಕೋಮು ಉದ್ವೇಗ ಸೃಷ್ಟಿಸಲು ಕಾರಣವಾಗುವಂತೆ ಮಾಡಿದ್ದಾರೆ ಎಂಬ ಆರೋಪವೂ ಇದೆ.
ಯುಪಿ ರಾಜ್ಯದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರು ನಡೆಸಿದ ಹಿಂಸಾಚಾರದ ವಿರುದ್ಧ ಯೋಗಿ ಆದಿತ್ಯನಾಥ ಸರ್ಕಾರವು ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಿದೆ. ಸಿಎಎ ವಿರೋಧಿ ದಂಗೆಕೋರರ ಆಸ್ತಿಯನ್ನು ವಶಪಡಿಸಿಕೊಳ್ಳುವುದಾಗಿ ಮತ್ತು ಹಾನಿಗೊಳಗಾದ ಸಾರ್ವಜನಿಕ ಆಸ್ತಿಯ ವೆಚ್ಚವನ್ನು ವಸೂಲಿ ಮಾಡುವುದಾಗಿ ಅದು ಘೋಷಿಸಿತ್ತು.
ಅದರಂತೆ ಸರ್ಕಾರವು ಸಿಎಎ ವಿರೋಧಿ ದಂಗೆಕೋರರಿಗೆ ಅವರ ಆಸ್ತಿ ವಶಪಡಿಸಿಕೊಳ್ಳುವ ನೋಟಿಸ್ಗಳನ್ನು ನೀಡಿತ್ತು. ಅಲಿಗಢದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರು ಭವಿಷ್ಯದಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ಭರವಸೆಯೊಂದಿಗೆ 50 ಲಕ್ಷ ರೂಪಾಯಿ ಬಾಂಡ್ ಅನ್ನೂ ಬರೆದುಕೊಡುವಂತೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.