ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಸ್ಥಾಪನೆ ಮಾಡುವ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿರುವ ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ’ ಟ್ರಸ್ಟ್ನ ಮೊದಲ ಸಭೆ ನಾಳೆ (ಫೆ.19) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ, ಟ್ರಸ್ಟ್ನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ಇತರ ಪದಾಧಿಕಾರಿಗಳ ಆಯ್ಕೆಯಾಗುವ ಸಾಧ್ಯತೆಯಿದೆ.
ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸ್ವೀಕರಿಸಲು ಟ್ರಸ್ಟ್ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗುತ್ತದೆ. ಸಭೆಯಲ್ಲಿ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರನ್ನು ಟ್ರಸ್ಟ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಜವಾಬ್ದಾರಿಯನ್ನು ನಿರ್ವಹಿಸಲು ಸ್ವತಂತ್ರ ಟ್ರಸ್ಟ್ ಅನ್ನು ಘೋಷಿಸಿದ್ದರು. ಟ್ರಸ್ಟ್ ಒಟ್ಟು 15 ಸದಸ್ಯರನ್ನು ಒಳಗೊಂಡಿದೆ. ಇದರಲ್ಲಿ 9 ಖಾಯಂ ಮತ್ತು 6 ನಾಮನಿರ್ದೇಶಿತ ಸದಸ್ಯರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಂದು ಕರೆಯಲ್ಪಡುವ ಈ ಟ್ರಸ್ಟ್ ಅನ್ನು ಸುಪ್ರೀಂಕೋರ್ಟ್ ನಿರ್ದೇಶನದಂತೆ ರಚಿಸಲಾಗಿದೆ.
ಟ್ರಸ್ಟ್ನ ಮೊದಲ ಸದಸ್ಯರಾಗಿ ಕೆ.ಪರಾಸರನ್ ಅವರನ್ನು ನೇಮಕ ಮಾಡಲಾಗಿದೆ. ಅಯೋಧ್ಯೆ ಜಿಲ್ಲಾಧಿಕಾರಿ ಅನುಜ್ ಕುಮಾರ್ ಜಾ ಅವರನ್ನು ಟ್ರಸ್ಟ್ ಸದಸ್ಯರನ್ನಾಗಿ ನೇಮಿಸಲಾಗಿದೆಯಿತು. ಶಂಕರಾಚಾರ್ಯ ವಾಸುದೇವನಂದ್ ಮಹಾರಾಜ್, ಪರಮಾನಂದ ಜಿಮಹರಾಜ ಹರಿದ್ವಾರ, ಸ್ವಾಮಿ ಗೋವಿಂದಗಿರಿ ಜೀ ಪುಣೆ, ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಡಾ.ಅನಿಲ್ ಮಿಶ್ರಾ ಹೋಮಿಯೋಪತಿ ಅಯೋಧ್ಯೆ, ಡಾ.ಕಮಲೇಶ್ವರ್ ಚೌಪಲ್ ಪಾಟ್ನಾ ಮತ್ತು ಮಹಾಂತ ದಿನೇಂದ್ರ ದಾಸ್ ನಿರ್ಮೋಹಿ ಅಖಾರ, ವಿಶ್ವ ಪ್ರಸನ್ನತೀರ್ಥ ಜೀ ಮಹಾರಾಜ್ ಮುಂತಾದವರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.