ನವದೆಹಲಿ: ಗಯಾದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನಕ್ಸಲ್ ಮಹಿಳೆಯೊಬ್ಬಳನ್ನು ಬಂಧನಕ್ಕೊಳಪಡಿಸಲಾಗಿದೆ. ನಕ್ಸಲ್ ಮಹಿಳೆಯ ಬಂಧನವನ್ನು ಗಯಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಂಧಿತ ನಕ್ಸಲ್ ಮಹಿಳೆಯನ್ನು ಕಲಾವತಿ ಎಂದು ಗುರುತಿಸಲಾಗಿದೆ.
“ನಕ್ಸಲರು ಪ್ರತಿಭಟನೆಯ ಸೋಗಿನಲ್ಲಿ ಜನರನ್ನು ಒಟ್ಟುಗೂಡಿಸಲು ಯೋಜಿಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ದೊರೆತಿದೆ. ಹಿಂದಿನ ಪ್ರಕರಣಗಳಲ್ಲಿಯೂ ಆಕೆ ಪೊಲೀಸರಿಗೆ ಬೇಕಾಗಿದ್ದಳು, ಹೀಗಾಗಿ ಆಕೆಯನ್ನು ಬಂಧಿಸಲಾಯಿತು” ಎಂದು ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
“ಕೆಲ ನಕ್ಸಲರು ಪ್ರತಿಭಟನೆಯನ್ನು ಬಳಸಿಕೊಂಡು ತಮ್ಮ ನಿಷೇಧಿತ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ
ಬಂಧಿತ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದಿದ್ದಾರೆ.
ಮಹಿಳೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.