ಶ್ರೀನಗರ: ಪುಲ್ವಾಮ ಜಿಲ್ಲೆಯ ಟ್ರಾಲ್ನಲ್ಲಿ ಮಂಗಳವಾರ ಸಂಜೆ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಅವಿತುಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಈ ವೇಳೆ ಎನ್ಕೌಂಟರ್ ಪ್ರಾರಂಭಗೊಂಡಿದೆ. 42 ರಾಷ್ಟ್ರೀಯ ರೈಫಲ್ಸ್, ಕೇಂದ್ರ ಮೀಸಲು ಪೊಲೀಸ್ ಪಡೆಯ 180 ಬೆಟಾಲಿಯನ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ಎನ್ಕೌಂಟರ್ ಅನ್ನು ದೃಢಪಡಿಸಿರುವ ಕಾಶ್ಮೀರ ವಲಯ ಪೊಲೀಸರು ಟ್ವಿಟ್ ಮಾಡಿ, “ಅವಂತಿಪೋರಾ: ಟ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು 3 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಹೆಚ್ಚಿನ ವಿವರಗಳು ಮುಂದೆ ಸಿಗಲಿದೆ” ಎಂದಿದ್ದಾರೆ.
ಮೃತ ಭಯೋತ್ಪಾದಕರು ಅನ್ಸಾರ್-ಉಲ್ ಘಜ್ವತ್-ಉಲ್-ಹಿಂದ್ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು. ಇವರುಗಳನ್ನು ಜೆಹಂಜರ್ ಅಹ್ಮದ್ ವಾನಿ, ರಾಜು ಉಮರ್ ಮತ್ತು ಉಜೈರ್ ಅಮೀನ್ ಭಟ್ ಎಂದು ಗುರುತಿಸಲಾಗಿದೆ.
ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಎಕೆ -47, 2 ಮ್ಯಾಗ್ಗಳೊಂದಿಗೆ ಒಂದು ಎಕೆ -56, ಒಂದು ಪಿಸ್ತೂಲ್ ಮತ್ತು ಎರಡು ಕೈ ಗ್ರೆನೇಡ್ಗಳನ್ನು ಎನ್ಕೌಂಟರ್ ಸೈಟ್ನಿಂದ ವಶಪಡಿಸಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.