ನವದೆಹಲಿ: ಚೀನಾದ ಕೊರೋನವೈರಸ್ ಪೀಡಿತ ವುಹಾನ್ ನಗರದಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಲುವಾಗಿ ಭಾರತವು ಗುರುವಾರ ಭಾರತೀಯ ವಾಯುಪಡೆಯ ಸಿ -17 ಗ್ಲೋಬ್ಮಾಸ್ಟರ್ ವಿಮಾನವನ್ನು ಅಲ್ಲಿಗೆ ಕಳುಹಿಸಿಕೊಡಲು ಸಜ್ಜಾಗಿದೆ ಎಂದು ವರದಿಗಳು ತಿಳಿಸಿವೆ.
ಚೀನಾದ ವುಹಾನ್ ನಗರಕ್ಕೆ ವಾಯುಪಡೆಯ ಈ ವಿಮಾನ ತೆರಳಲಿದೆ. ವುಹಾನ್ ನಗರ ವ್ಯಾಪಕ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿದೆ. ಚೀನಾದಲ್ಲೇ ಕೊರೋನವೈರಸ್ ಕಾರಣದಿಂದಾಗಿ 2,000 ಕ್ಕೂ ಹೆಚ್ಚು ಜನರ ಸಾವಿಗೆ ತುತ್ತಾಗಿದ್ದಾರೆ.
ಅಲ್ಲದೇ, ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ ಚೀನಾದಲ್ಲಿ 74,000 ಕ್ಕಿಂತ ಹೆಚ್ಚಾಗಿದೆ. ರಾಷ್ಟ್ರದ ಹುಬೈ ಪ್ರಾಂತ್ಯದಲ್ಲಿರುವ ವುಹಾನ್ ನಗರದಲ್ಲಿಯೇ ಈ ರೋಗವನ್ನು ಮೊದಲು ಪತ್ತೆ ಮಾಡಲಾಯಿತು. ಅಂದಿನಿಂದ ಇದು ಭಾರತ ಸೇರಿದಂತೆ ವಿಶ್ವದಾದ್ಯಂತ 20 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಹರಡಿದೆ.
ಈಗಾಗಲೇ, ಏರ್ ಇಂಡಿಯಾದ ಎರಡು ವಿಶೇಷ ವಿಮಾನಗಳಲ್ಲಿ ಭಾರತವು ಏಳು ಮಾಲ್ಡೀವಿಯನ್ ನಾಗರಿಕರು ಸೇರಿದಂತೆ 600 ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ವುಹಾನ್ನಿಂದ ಭಾರತಕ್ಕೆ ಸ್ಥಳಾಂತರಿಸಿದೆ. ಅವರನ್ನು ಪ್ರತ್ಯೇಕವಾಗಿ ಹರಿಯಾಣದ ಮನೇಸರ್ ನಲ್ಲಿನ ಒಂದು ಸೌಲಭ್ಯದಲ್ಲಿ ಇರಿಸಲಾಗಿತ್ತು.
ವರದಿಗಳ ಪ್ರಕಾರ, ಭಾರತೀಯ ಸೇನೆಯ ಮಾನೇಸರ್ ಸೌಲಭ್ಯದಲ್ಲಿ 248 ಜನರನ್ನು ಇಡಲಾಗಿದೆ ಮತ್ತು ಇತ್ತೀಚಿನ ಪರೀಕ್ಷೆಗಳಲ್ಲಿ ಕೊರೊನಾವೈರಸ್ ಸೋಂಕು ಇಲ್ಲ ಎಂದು ಸಾಬೀತಾದ 248 ಜನರನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.