ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮರಾಠ ಮಹಾರಾಜನಿಗೆ ಬುಧವಾರ ಗೌರವ ಸಲ್ಲಿಸಿದರು. ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ ಎಂದು ಮೋದಿ ಬಣ್ಣಿಸಿದರು.
ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಹೂವುಗಳನ್ನು ಅರ್ಪಿಸುವ ಮೂಲಕ ಮೋದಿ ಮಹಾನ್ ರಾಜನಿಗೆ ನಮನ ಸಲ್ಲಿಸಿದರು. ಈ ಬಗೆಗಿನ ಫೋಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ.
“ತಾಯಿ ಭಾರತೀಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ, ಧೈರ್ಯ, ಸಹಾನುಭೂತಿ ಮತ್ತು ಉತ್ತಮ ಆಡಳಿತದ ಸಾಕಾರ ಮೂರ್ತಿಯಾದ, ಅಸಾಧಾರಣ ವ್ಯಕ್ತಿತ್ವ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿಯಂದು ಅವರಿಗೆ ನಮಿಸುತ್ತಿದ್ದೇನೆ. ಅವರ ಜೀವನವು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಶಿವಾಜಿ ಮಹಾರಾಜರ ಜೀವನವು ಅನೇಕ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
“ಛತ್ರಪತಿ ಶಿವಾಜಿ ಮಹಾರಾಜ ಒಬ್ಬ ಶೂರ ಯೋಧ ಮತ್ತು ಮಹೋನ್ನತ ಆಡಳಿತಗಾರನಾಗಿ ಗುರುತಿಸಿಕೊಂಡಿದ್ದಾರೆ. ಬಲವಾದ ನೌಕಾಪಡೆಯೊಂದನ್ನು ನಿರ್ಮಿಸುವುದರಿಂದ ಹಿಡಿದು ಹಲವಾರು ಜನರ ಪರವಾದ ನೀತಿಗಳನ್ನು ರೂಪಿಸುವವರೆಗೆ, ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮವಾಗಿದ್ದರು. ಅನ್ಯಾಯ ಮತ್ತು ಬೆದರಿಕೆಗಳ ವಿರುದ್ಧದ ಹೋರಾಟಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು” ಎಂದು ಮೋದಿ ಹೇಳಿದ್ದಾರೆ.
ಛತ್ರಪತಿ ಶಿವಾಜಿ, ಫೆಬ್ರವರಿ 19, 1630 ರಂದು ಪುಣೆಯ ಶಿವನೇರಿ ಕೋಟೆಯಲ್ಲಿ ಜನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.