ನವದೆಹಲಿ: ಫೆಬ್ರವರಿ 23 ರೊಳಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ ಕನಿಷ್ಠ 10 ಮಿಲಿಯನ್ ರೈತರನ್ನು ನೋಂದಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದ್ದಾರೆ. ಔಪಚಾರಿಕ ಸಾಲ ನೀಡುವ ಮೂಲಗಳಿಗೆ ಕೃಷಿಕರ ಪ್ರವೇಶವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಕಾರ್ಯಕ್ರಮದ ನಿಧಾನಗತಿಯ ಪ್ರಗತಿಯ ಬಗ್ಗೆ ಮೋದಿ ಆತಂಕ ವ್ಯಕ್ತಪಡಿಸಿ ಈ ಸೂಚನೆಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೈತರಿಗೆ ಕಾರ್ಡ್ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಮೆರಿಕಾ ಅಧ್ಯಕ್ಷರ ಭಾರತ ಭೇಟಯ ಬಳಿಕ ಕಾರ್ಯಕ್ರಮ ಏರ್ಪಡುವ ನಿರೀಕ್ಷೆ ಇದೆ ಎನ್ನಲಾಗಿದೆ.
ರಸಗೊಬ್ಬರಗಳಿಂದ ಹಿಡಿದು ನೀರಾವರಿ ಉಪಕರಣಗಳವರೆಗೆ ವಿವಿಧ ವಸ್ತುಗಳನ್ನು ಖರೀದಿಸಲು ರೈತರು ಕೃಷಿ ಸಾಲವನ್ನು ಅವಲಂಬಿಸಿದ್ದಾರೆ. ಸಾಂಸ್ಥಿಕ ಸಾಲಕ್ಕೆ ಸಮರ್ಪಕ ಪ್ರವೇಶದ ಕೊರತೆ ಇರುವುದರಿಂದ ರೈತರು ಹೆಚ್ಚಾಗಿ ಖಾಸಗಿ ಸಾಲಗಾರರಿಂದ ಬಡ್ಡಿಗೆ ಸಾಲವನ್ನು ತೆಗೆದುಕೊಳ್ಳುತ್ತಾರೆ.
ಈ ತಿಂಗಳ ಆರಂಭದಲ್ಲಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪಿಎಂ-ಕಿಸಾನ್ ಯೋಜನೆಯಡಿ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳು ಸಿಗದೇ ಇರುವುದು ಕಳವಳಕಾರಿ ವಿಷಯ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಪಿಎಂ-ಕಿಸಾನ್ ಎಲ್ಲಾ ರೈತರಿಗೆ ಸರ್ಕಾರದ ಪ್ರಮುಖ ಆದಾಯ ಬೆಂಬಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ನೋಂದಾಯಿತ ರೈತರು ಮೂರು ಕಂತುಗಳಲ್ಲಿ ವರ್ಷಕ್ಕೆ 6,000 ರೂಪಾಯಿ ಪಡೆಯುತ್ತಾರೆ.
ಕೃಷಿ ಸಚಿವಾಲಯವು ಈಗಾಗಲೇ ಪಿಎಂ-ಕಿಸಾನ್ ಅಡಿಯಲ್ಲಿ 85 ಮಿಲಿಯನ್ ರೈತರ ವಿವರಗಳನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.