ನವದೆಹಲಿ: ಈ ವರ್ಷದ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವನ್ನು (ಸಿಸಿಪಿಎ) ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.
ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಸ್ಥಾಪಿಸಲಾಗುವ ಸಿಸಿಪಿಎ, ಗ್ರಾಹಕರ ಹಕ್ಕುಗಳು, ನ್ಯಾಯಸಮ್ಮತವಲ್ಲದ ವ್ಯಾಪಾರ ಅಭ್ಯಾಸಗಳು, ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮಕೈಗೊಳ್ಳಲಿದೆ. ಅಲ್ಲದೆ, ನಕಲಿ ಮತ್ತು ಕಲಬೆರಕೆ ಉತ್ಪನ್ನಗಳ ಮಾರಾಟದ ಮೇಲೆ ದಂಡವನ್ನು ವಿಧಿಸಲಿದೆ.
ಸಿಸಿಪಿಎ ಪಾತ್ರಗಳು ಮತ್ತು ಕಾರ್ಯಗಳ ಬಗ್ಗೆ ಉದ್ಯಮ ಸಂಸ್ಥೆಗಳೊಂದಿಗೆ ಸಂವಾದ ನಡೆಸಿದ ನಂತರ ನವದೆಹಲಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಪಾಸ್ವಾನ್ ಅವರು, ಪ್ರಾಧಿಕಾರದ ಆಶ್ರಯದಲ್ಲಿ ತನಿಖಾ ವಿಭಾಗವನ್ನು ರಚಿಸಲಾಗುವುದು ಮತ್ತು ಇದು ನ್ಯಾಯಸಮ್ಮತವಲ್ಲದ ವ್ಯಾಪಾರ ಅಭ್ಯಾಸಗಳು ಮತ್ತು ದಾರಿತಪ್ಪಿಸುವ ಜಾಹೀರಾತುಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದರು.
ಒಂದೂವರೆ ತಿಂಗಳಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ನಿಯಮಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.
ಗ್ರಾಹಕರ ಹಿತಾಸಕ್ತಿ ಕಾಪಾಡುವುದು ಸರ್ಕಾರಕ್ಕೆ ಅತ್ಯುನ್ನತ ಆದ್ಯತೆಯಾಗಿದೆ ಎಂದು ಸಚಿವರು ಪ್ರತಿಪಾದಿಸಿದ್ದಾರೆ. ಕೈಗಾರಿಕಾ ಸಂಸ್ಥೆಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಈ ಕ್ಷೇತ್ರಗಳಿಗೆ ಯಾವುದೇ ನಿಯಂತ್ರಕ ಸಂಸ್ಥೆ ಇಲ್ಲದಿರುವುದರಿಂದ ಇ-ಕಾಮರ್ಸ್ ಮತ್ತು ನೇರ ಮಾರಾಟವನ್ನು ನಿಯಂತ್ರಿಸುವ ಅಗತ್ಯವನ್ನು ಪಾಸ್ವಾನ್ ಒತ್ತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.