ನವದೆಹಲಿ: ”100 ಕೋಟಿ ಹಿಂದೂಗಳ ಮೇಲೆ ಪ್ರಾಬಲ್ಯ ಮೆರೆಯಲು 15 ಕೋಟಿ ಮುಸ್ಲಿಮರು ಸಾಕು” ಎಂದು ಹೇಳಿರುವ ಎಐಎಂಐಎಂ ನಾಯಕ ವಾರೀಸ್ ಪಠಾನ್ ವಿರುದ್ಧ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ವಾಗ್ದಾಳಿಯನ್ನು ನಡೆಸಿದ್ದಾರೆ. ನಾಗ್ಪುರದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಠಾನ್ ತಕ್ಷಣವೇ ತನ್ನ ಹೇಳಿಕೆಗೆ ಕ್ಷಮಾಯಾಚನೆ ನಡೆಸಬೇಕು ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆತನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.
“ವಾರೀಸ್ ಪಠಾನ್ ನೀಡಿರುವಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಮತ್ತು ಆತನಿಂದ ಕ್ಷಮೆಯಾಚನೆ ಮಾಡುತ್ತೇವೆ. ಒಂದು ವೇಳೆ ಆತ ಕ್ಷಮೆಯಾಚನೆ ಮಾಡದೇ ಹೋದರೆ ಸರ್ಕಾರ ಆತನ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಬೇಕು” ಎಂದಿದ್ದಾರೆ.
“ಈ ದೇಶದಲ್ಲಿ 100 ಕೋಟಿ ಹಿಂದೂಗಳು ವಾಸಿಸುತ್ತಿದ್ದಾರೆ ಎಂಬ ಕಾರಣದಿಂದಾಗಿಯೇ ಅಲ್ಪಸಂಖ್ಯಾತರು ಇಲ್ಲಿ ಸುರಕ್ಷಿತರಾಗಿದ್ದಾರೆ ಮತ್ತು ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ದೇಶದಲ್ಲಿ ಈ ರೀತಿಯ ಹೇಳಿಕೆ ನೀಡುವ ಸಾಹಸವನ್ನು ಯಾರೊಬ್ಬರೂ ಮಾಡುವುದಿಲ್ಲ. ಹಿಂದೂ ಸಮುದಾಯ ಸಹಿಷ್ಣುವಾಗಿದೆ ಆದರೆ ಅದರ ಸಹಿಷ್ಣುತೆಯನ್ನು ದೌರ್ಬಲ್ಯವೆಂದು ತಪ್ಪಾಗಿ ಅರ್ಥೈಸಬಾರದು” ಎಂದಿದ್ದಾರೆ.
“ವಾರೀಸ್ ಪಠಾನ್ ತಕ್ಷಣವೇ ರಾಷ್ಟ್ರ ಮತ್ತು ಹಿಂದೂ ಸಮುದಾಯದ ಕ್ಷಮೆಯಾಚನೆ ಮಾಡಬೇಕು” ಎಂದು ಫಡ್ನವಿಸ್ ಆಗ್ರಹಿಸಿದ್ದಾರೆ.
ವಾರಿಸ್ ಪಠಾಣ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 117, 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 16 ರಂದು ಉತ್ತರ ಕರ್ನಾಟಕದ ಕಲಬುರ್ಗಿಯಲ್ಲಿ ನಡೆದ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆಯ ಸಮಾವೇಶದಲ್ಲಿ ಆತ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.