ನವದೆಹಲಿ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವಂತೆ ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಅಯೋಧ್ಯೆಗೆ ಆಹ್ವಾನಿಸಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನರ್ತ್ಯ ಗೋಪಾಲ್ ದಾಸ್ ಮಹಾರಾಜ್ ಶುಕ್ರವಾರ ಹೇಳಿದ್ದಾರೆ.
“ನಾವು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಜಿಯವರನ್ನು ಆಹ್ವಾನಿಸಿದ್ದೇವೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು ಕೂಡ ಭಾಗಿಯಾಗಲಿದ್ದಾರೆ. ಧರ್ಮದ ಬಗ್ಗೆ ಆಸಕ್ತಿ ಹೊಂದಿರುವ ಇತರ ಎಲ್ಲ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭವ್ಯ ದೇವಾಲಯದ ನಿರ್ಮಾಣದಲ್ಲಿ ಭಾಗವಹಿಸಲು ಆಹ್ವಾನಿಸಲಾಗುವುದು. ಮಧ್ಯಪ್ರದೇಶ ಮುಖ್ಯಮಂತ್ರಿಯನ್ನೂ ಆಹ್ವಾನಿಸಲಾಗುವುದು” ಎಂದಿದ್ದಾರೆ.
ದೇವಾಲಯದ ನಿರ್ಮಾಣಕ್ಕೆ ಸರ್ಕಾರದಿಂದ ಯಾವುದೇ ಅನುದಾನ ತೆಗೆದುಕೊಳ್ಳುವುದಿಲ್ಲ ಎಂದು ರಾಮ ಮಂದಿರ ಟ್ರಸ್ಟ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
“ಸರ್ಕಾರದಿಂದ ಯಾವುದೇ ಅನುದಾನವನ್ನು ತೆಗೆದುಕೊಳ್ಳಲಾಗುವುದಿಲ್ಲ, ಸಾರ್ವಜನಿಕರ ಕೊಡುಗೆಗಳಿಂದ ದೇವಾಲಯವನ್ನು ನಿರ್ಮಿಸಲಾಗುವುದು. ಸರ್ಕಾರಕ್ಕೆ ಈಗಾಗಲೇ ಪರಿಹರಿಸಲು ಅನೇಕ ಸಮಸ್ಯೆಗಳಿವೆ, ನಾವು ಅದರ ಮೇಲೆ ಹೆಚ್ಚು ಹೊರೆ ಹೊರಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
ನಿನ್ನೆ, ಗೋಪಾಲ್ ದಾಸ್ ಮಹಾರಾಜ್ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿತ್ತು.
“ನಾವು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಅಯೋಧ್ಯೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದೇವೆ. ಪ್ರಸ್ತಾವನೆಯ ಬಗ್ಗೆ ಯೋಚಿಸುವುದಾಗಿ ಪ್ರಧಾನಿ ನಮಗೆ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಭವ್ಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು” ಎಂದು ಗೋಪಾಲ್ ದಾಸ್ ಮಹಾರಾಜ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.