ನವದೆಹಲಿ: ಭಯೋತ್ಪಾದಕರು ಮತ್ತು ಭ್ರಷ್ಟರಿಗೆ ಖಾಸಗಿತನದ ಹಕ್ಕು ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಹೇಳಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ನ್ಯಾಯಾಂಗದ ಮೇಲೆ ಜನರ ಒತ್ತಡವು “ಅಪಾಯಕಾರಿ ಪ್ರವೃತ್ತಿ” ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ ‘ನ್ಯಾಯಾಂಗ ಮತ್ತು ಬದಲಾಗುತ್ತಿರುವ ಜಗತ್ತು’ ಎಂಬ ವಿಷಯವನ್ನೊಳಗೊಂಡ ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದಲ್ಲಿ ಮಾತನಾಡಿದ ಸಚಿವರು, “ಭಯೋತ್ಪಾದಕರು ಮತ್ತು ಭ್ರಷ್ಟ ಜನರಿಗೆ ಖಾಸಗಿತನದ ಹಕ್ಕಿಲ್ಲ” ಎಂದು ಹೇಳಿದ್ದಾರೆ.
“ಕೆಲವರು ಯಾವ ರೀತಿಯ ತೀರ್ಪುಗಳನ್ನು ನ್ಯಾಯಾಲಯಗಳು ನೀಡಬೇಕು ಎಂಬ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರವನ್ನು ಪ್ರಾರಂಭಿಸುತ್ತಾರೆ. ನ್ಯಾಯಾಧೀಶರು ತಾವು ನಿರೀಕ್ಷಿಸಿದ ತೀರ್ಪು ನೀಡದಿದ್ದರೆ ಟೀಕಿಸುತ್ತಾರೆ. ನ್ಯಾಯಾಂಗದ ಮೇಲೆ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ನ್ಯಾಯಾಂಗದ ಮೇಲೆ ಜನತೆಯ ಒತ್ತಡವು ಅಪಾಯಕಾರಿ ಪ್ರವೃತ್ತಿಯಾಗಿದೆ” ಎಂದು ಅವರು ಹೇಳಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ನಾವು ಭಿನ್ನಾಭಿಪ್ರಾಯವನ್ನು ಸ್ವಾಗತಿಸುತ್ತೇವೆ, ನಾವು ಜನಪರತೆಯನ್ನು ಸ್ವಾಗತಿಸುತ್ತೇವೆ. ಆದರೆ ಜನಪ್ರಿಯತೆಯು ಸಾಂವಿಧಾನಿಕ ಹಕ್ಕುಗಳಿಗೆ ಅಡ್ಡಿಯಾಗಬಹುದು” ಎಂದು ಅವರು ಹೇಳಿದ್ದಾರೆ.
ಭಾಷಣ ಮತ್ತು ಅಭಿವ್ಯಕ್ತಿ ಹಕ್ಕುಗಳ ಮೂಲಭೂತ ಹಕ್ಕಿನ ಕುರಿತು ಮಾತನಾಡಿದ ಅವರು, “ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳಿ, ಪ್ರಶ್ನೆಗಳನ್ನು ಕೇಳಿ, ಆದರೆ ಭಾರತದ ಗುರುತನ್ನು ಸ್ಥಿರವಾಗಿ ಇಟ್ಟುಕೊಳ್ಳಿ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.